Breaking News

ಅಖಂಡ ಶ್ರೀನಿವಾಸ ಮೂರ್ತಿ ಬದುಕು ಅಕ್ಷರಶಃ ಬೀದಿಗೆ

Spread the love

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ್‍ಮೂರ್ತಿ ಮನೆ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಒಂದೂ ವಸ್ತು ಉಳಿದಿಲ್ಲ. ಬಟ್ಟೆ ಸೇರಿ ಎಲ್ಲವೂ ಸುಟ್ಟು ಕರಕಲಾಗಿದೆ. ಈ ಹಿನ್ನೆಲೆ ಶಾಸಕರು ಇಂದು ಬೆಳಗ್ಗೆ ಬಟ್ಟೆ ಖರೀದಿಸಿದ್ದಾರೆ.

ಇಂದು ಬೆಳಗ್ಗೆ ಅವರ ಸ್ನೇಹಿತರು ಪ್ಯಾಂಟ್, ಶರ್ಟ್ ತಂದು ಕೊಟ್ಟಿದ್ದಾರೆ. ನಿನ್ನೆ ಮನೆಯಿಂದ ಹೊರಹೋಗುವಾಗ ಹಾಕಿದ್ದ ಪ್ಯಾಂಟ್ ಶರ್ಟ್ ಬಿಟ್ಟರೆ ಮನೆಯಲ್ಲಿದ್ದ ಬೇರೆ ಎಲ್ಲ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅವರ ಪತ್ನಿ, ಮಕ್ಕಳು ಸಹ ಇಂದು ಹೊಸದಾಗಿ ಬಟ್ಟೆ ಖರೀದಿಸಿ ಧರಿಸಿದ್ದಾರೆ. ಅಲ್ಲದೆ ತಾತ್ಕಾಲಿಕವಾಗಿ ನಗರದ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಮೂರು ಅಂತಸ್ಥಿನ ಮನೆ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಕಾರಣ ಶಾಸಕರ ಕುಟುಂಬ ಪ್ರಾಣಾಪಾಯದಿಂದ ಪಾರಾಗಿದೆ. ಸೋಫಾ, ಟೇಬಲ್, ಖುರ್ಚಿ ಸೇರಿ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಪೆಟ್ರೋಲ್ ಬಾಂಬ್ ಮೂಲಕ ಇಡೀ ರಾತ್ರಿ ಮನೆಗೆ ಬೆಂಕಿ ಹಚ್ಚಿದ್ದಾರೆ. ಇದು ಶಾಸಕರು ಇಷ್ಟು ದಿನ ವಾಸವಿದ್ದ ಮನೆಯೇ ಎಂಬ ಅನುಮಾನ ಮೂಡುತ್ತದೆ. ಅಷ್ಟರಮಟ್ಟಿಗೆ ಎಲ್ಲವೂ ಸುಟ್ಟು ಹೋಗಿದೆ.ಕೇವಲ ಶಾಸಕರ ಮನೆ, ವಾಹನಗಳು ಮಾತ್ರವಲ್ಲ ಡಿಜೆ ಹಳ್ಳಿ ಪೊಲೀಸ್ ಠಾಣೆ ಸಹ ಸುಟ್ಟು ಕರಕಲಾಗಿದೆ. ಅಲ್ಲದೆ ಸ್ಥಳೀಯರ ವಾಹನಗಳಿಗೂ ಸಹ ಬೆಂಕಿ ಹಚ್ಚಿದ್ದು, ಹಲವು ವಾಹನಗಳು ಸುಟ್ಟು ಕರಕಲಾಗಿವೆ. ಅಲ್ಲದೆ ಶಾಸಕರ ಮನೆ ಎಂದುಕೊಂಡು ಪಕ್ಕದ ಮನೆಯೊಳಗೆ ನುಗ್ಗಿ ವಸ್ತುಗಳನ್ನು ನಾಶ ಮಾಡಿದ್ದಾರೆ. ಅಲ್ಲದೆ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದು, ಡಿಸಿಪಿ ವಾಹನವನ್ನು ಸಹ ಬಿಡದೆ ಬೆಂಕಿ ಹಚ್ಚಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.


Spread the love

About Laxminews 24x7

Check Also

ನಿರ್ದೇಶಕ ಯೋಗರಾಜ್ ಭಟ್ ಮೇಲೆ ಎಫ್​ಐಆರ್

Spread the love ಕಳೆದ ಕೆಲವು ದಿನಗಳಿಂದ ‘ಮನದ ಕಡಲು’ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿತ್ತು. 30 ಅಡಿ ಎತ್ತರದಲ್ಲಿದ್ದ ಲೈಟ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ