Breaking News

KRS ಭರ್ತಿಗೆ ಇನ್ನೊಂದು ಅಡಿ ಬಾಕಿ-ಮೆಟ್ಟೂರು ಜಲಾಶಯಕ್ಕೆ 33.55 ಟಿಎಂಸಿ ನೀರು

Spread the love

ಮಂಡ್ಯ/ಚಾಮರಾಜನಗರ: ಮಂಡ್ಯ ಜಿಲ್ಲೆಯಲ್ಲಿರುವ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‍ಎಸ್ ಡ್ಯಾಂ ಭರ್ತಿಗೆ ಇನ್ನೊಂದು ಅಡಿ ಬಾಕಿ ಇದೆ. ನಾಳೆ ವೇಳೆಗೆ ಜಲಾಶಯ ಬಹುತೇಕ ಭರ್ತಿ ಆಗಲಿದೆಜಲಾಶಯದ ಗರಿಷ್ಠ ಸಾಮರ್ಥ್ಯ 124.80 ಅಡಿಗಳಿದ್ದು, ಸದ್ಯ 123.45 ಅಡಿ ಭರ್ತಿಯಾಗಿದೆ. ಜಲಾಶಯಕ್ಕೆ 18,027 ಕ್ಯೂಸೆಕ್ ಒಳ ಹರಿವು, 18,027 ಕ್ಯೂಸೆಕ್ ಒಳ ಹರಿವು ಇದೆ. ಒಂದೇ ವಾರದಲ್ಲಿ ತಮಿಳುನಾಡಿನ ಮೆಟ್ಟೂರು ಜಲಾಶಯಕ್ಕೆ ಹರಿದ 33.55 ಟಿಎಂಸಿ ನೀರು ಹರಿದಿದ್ದು, ತಲೆದೋರಲಿದ್ದ ಕಾವೇರಿ ಸದ್ಯಕ್ಕೆ ದೂರವಾಗಿದೆ.

ಕಬಿನಿ ಹಾಗೂ ಕೆಆರ್‍ಎಸ್ ನಿಂದ ಅಪಾರ ಪ್ರಮಾಣದ ನೀರು ಬಿಟ್ಟ ಹಿನ್ನೆಲೆ ಒಂದೇ ವಾರದಲ್ಲಿ ತಮಿಳುನಾಡಿಗೆ ಅಪಾರ ಪ್ರಮಾಣದ ನೀರು ಹರಿಸಲಾಗಿದೆ. ಆಗಸ್ಟ್ 7 ರಂದು ಕೇವಲ 28.99 ಟಿಎಂಸಿ ಇದ್ದ ನೀರು ಇಂದು 61.54 ಟಿಎಂಸಿಗೆ ಏರಿಕೆಯಾಗಿದೆ. ಮೆಟ್ಟೂರು ಡ್ಯಾಂನ ಗರಿಷ್ಠ ಮಟ್ಟ 120 ಅಡಿಗಳಿದ್ದು, ಸದ್ಯ 97 ಅಡಿ ಭರ್ತಿಯಾಗಿದೆ.

 


Spread the love

About Laxminews 24x7

Check Also

ಮಹಾ ಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ – ಅರಣ್ಯ, ಪೊಲೀಸ್ ಇಲಾಖೆ ಕಣ್ಗಾವಲು

Spread the loveಚಾಮರಾಜನಗರ: ಮಹಾ ಶಿವರಾತ್ರಿ ಹಿನ್ನೆಲೆ ಏಳು ಮಲೆಯ ಒಡೆಯ ಮಲೆ ಮಾದಪ್ಪನ  ದರ್ಶನಕ್ಕೆ ಕಾಲ್ನಡಿಗೆಯಲ್ಲಿ ಲಕ್ಷಾಂತರ ಭಕ್ತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ