ರಮೇಶ ಜಾರಕಿಹೊಳಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರಾಜ್ಯ ರೈತ ಸಂಘದ ಕಾರ್ಯಕರ್ತರು

Spread the love

ಗೋಕಾಕ:  ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರದ್ದುಪಡಿಸಬೇಕೆಂದು ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಪ್ರತಿಭಟನೆ ನಡೆಯುತ್ತಿದ್ದ  ಬಸವೇಶ್ವರ ವೃತ್ತದಿಂದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಗೆ ತೆರಳಿ ಮನವಿ ನೀಡಲು ಮುಂದಾದ  ರೈತರನ್ನು ಪೊಲೀಸರು ಅಲ್ಲಿಯೇ ಘೇರಾವ್ ಹಾಕಿ ತಡೆದರು.

ಮುಂಜಾಗೃತಾ ಕ್ರಮವಾಗಿ ಸಚಿವರ ಮನೆಯ ಸುತ್ತ ಬಿಗಿ ಭದ್ರತೆಯನ್ನು ಪೊಲೀಸರು ಮಾಡಿದ್ದಾರೆ.

ರೈತ ವಿರೋಧಿ ಸರ್ಕಾರ ಎಂದು ಧಿಕ್ಕಾರ ಕೂಗಿದ ರೈತರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು.  ಇದು ಭೂ ಸುಧಾರಣಾ ಕಾಯ್ದೆ ಅಲ್ಲ  ಭೂ ಕಬಳಿಕೆ ಕಾಯ್ದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ

ವಿವಾದಿತ ಭು ಸುದಾರಣೆ ಕಾಯ್ದೆಯ ತಿದ್ದಪಡಿಯನ್ನು ರದ್ದುಪಡಿಸಬೇಕೆ ಎಂದು ರಾಜ್ಯಾದ್ಯಂತ ರೈತರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.


Spread the love

About Laxminews 24x7

Check Also

ಗಡಿ ಗ್ರಾಮಗಳಲ್ಲಿ ಜಲ ಸಮಸ್ಯೆ

Spread the loveಸಂಬರಗಿ: ಶಿರೂರು, ಪಾಂಡೇಗಾಂವ್, ಜಂಬಗಿ, ಸಂಬರಗಿ, ಜಕಾರಟಿ ಸೇರಿದಂತೆ ಗಡಿಭಾಗದ ಬಹುತೇಕ ಗ್ರಾಮಗಳಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ