Breaking News

ಮೂರು ಕಾರಣಗಳಿಗೆ ಹೊತ್ತಿ ಉರಿಯಿತು ಬೆಂಗಳೂರು

Spread the love

ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಾಟೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳು ಕೆಲ ವಿಚಾರಗಳನ್ನು ಬಾಯಿ ಬಿಟ್ಟಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿ ದೊಂಬಿ ಎಬ್ಬಿಸಿದ್ದಕ್ಕೆ ಕಾರಣಗಳನ್ನ ಕೊಟ್ಟಿದ್ದಾರೆ. ಮೂರು ಕಾರಣಗಳಿಂದಾಗಿ ಬೆಂಗಳೂರು ಹೊತ್ತಿ ಉರಿದಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಲ್ಲಿ ದೊಂಬಿ ಎಬ್ಬಿಸಿದ್ದಕ್ಕೆ ಕಾರಣ ಕೊಟ್ಟ ಕಿರಾತಕರು!
1. ಎನ್‍ಆರ್ ಸಿ ಸಿಟ್ಟೇ ಬೆಂಗಳೂರು ಗಲಭೆಗೆ ಕಾರಣವಂತೆ
2. ‘ನಮ್ಮನ್ನು ದೇಶ ಬಿಟ್ಟು ಓಡಿಸ್ತಾರೆ, ನಾವು ಹುಟ್ಟಿದ್ದು ಇಲ್ಲೇ’
3. ‘ನಮಗೆ ಸ್ವಾತಂತ್ರ್ಯ ಇಲ್ವಾ? ನಾವ್ಯಾಕೆ ದೇಶ ಬಿಡಬೇಕು?’

ಗಲಾಟೆ ನಡೆದ ಸ್ಥಳದಲ್ಲಿ ಮೂರು ಪ್ರಚೋದನೆಯ ಮಾತುಗಳನ್ನು ಕೇಳಿದ ಕಿಡಿಗೇಡಿಗಳು ದೊಂಬಿ ಎಬ್ಬಿಸಿದ್ದಾರೆ. ನಮ್ಮ ಕೋಪವನ್ನು ಗಲಭೆ ಮೂಲಕ ತೀರಿಸಿಕೊಂಡಿದ್ದೇವೆ ಎಂದು ಕಿಡಿಗೇಡಿಗಳು ಪೊಲೀಸರ ಮುಂದೆ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ನವೀನ್ ಆಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣದ ಕುರಿತು ಕೆಲ ಪೋಸ್ಟ್ ಮಾಡಿಕೊಂಡಿದ್ದು, ಗಲಭೆಗೆ ಕಾರಣವಾಗಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ