Breaking News

ದಿನಸಿ ಖರೀದಿಗೆ ಹೋಗಿದ್ದ ನಾಲ್ವರು ಅಗತ್ಯ ವಸ್ತುಗಳನ್ನ ಖರೀದಿಸಿ ಮರಳುವಾಗ ನಾಲ್ವರು ನಾಪತ್ತೆ

Spread the love

ರಾಯಚೂರು: ದಿನಸಿ ತರಲು ತೆಲಂಗಾಣಕ್ಕೆ ತೆರಳಿದ್ದ ರಾಯಚೂರು ತಾಲೂಕಿನ ಕುರ್ವಕಲಾ ನಡುಗಡ್ಡೆ ಗ್ರಾಮದ 13 ಜನ ಮರಳಿ ಬರುವಾಗ ತೆಪ್ಪ ಮುಗುಚಿ ಬಿದ್ದು ನಾಲ್ವರು ನಾಪತ್ತೆಯಾಗಿದ್ದಾರೆ. ಕುರ್ವಾಕಲಾ ಗ್ರಾಮದ ಪಾರ್ವತಿ (55) ನರಸಮ್ಮ (36) ಸುಮಲತಾ (32) ಪೂಜಾ (10) ನಾಪತ್ತೆಯಾದವರು. ತೆಲಂಗಾಣದ ಪಂಚಪಾಡಕ್ಕೆ ದಿನಸಿ ಖರೀದಿಗೆ ಹೋಗಿದ್ದ ನಾಲ್ವರು ಅಗತ್ಯ ವಸ್ತುಗಳನ್ನ ಖರೀದಿಸಿ ಮರಳುವಾಗ ಘಟನೆ ನಡೆದಿದೆ. 13 ಜನರಲ್ಲಿ 9 ಜನ ಈಜಿ ದಡ ಸೇರಲು ಹರಸಾಹಸ ಪಡುತ್ತಿದ್ದಾಗ ದಡದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಕೂಡಲೇ ತೆಪ್ಪದಲ್ಲಿ ತೆರಳಿ 9 ಜನರನ್ನ ರಕ್ಷಿಸಿದ್ದಾರೆ. ಆದರೆ ತಾಯಿ ಸುಮಲತಾ ಮಗಳು ರೋಜಾ ಸೇರಿ ನಾಲ್ಕು ಜನ ನೀರಿನ ಸೆಳೆತಕ್ಕೆ ನಾಪತ್ತೆಯಾಗಿದ್ದಾರೆ.

ಮಾಹಿತಿ ತಿಳಿದ ತಕ್ಷಣವೇ ಯಾಪಲದಿನ್ನಿ ಪೋಲೀಸರು ನದಿ ದಡಕ್ಕೆ ತೆರಳಿದರಾದ್ರೂ ರಕ್ಷಣಾ ಕಾರ್ಯ ಸಾಧ್ಯವಾಗಿಲ್ಲ. ತೆಲಂಗಾಣದ ಮಕ್ತಲ್ ಠಾಣೆ ಪೊಲೀಸರು, ಅಲ್ಲಿನ ತೆಪ್ಪ ನಡೆಸುವವರು ಕೂಡಲೇ ರಕ್ಷಣಾ ಕಾರ್ಯಚರಣೆ ಮಾಡಿದ್ದಾರೆ. ಆದರೆ ಮೂವರು ಮಹಿಳೆಯರು ಹಾಗೂ ಓರ್ವ ಬಾಲಕಿ ನೀರಿನಲ್ಲಿ ನಾಪತ್ತೆಯಾಗಿದ್ದಾರೆ. ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್, ರಾಯಚೂರು ಸಹಾಯಕ ಆಯುಕ್ತ ಸಂತೋಷ್ ಹಾಗೂ ಎನ್ ಡಿ ಆರ್ ಎಫ್ ತಂಡ ತೆಲಂಗಾಣಕ್ಕೆ ತೆರಳಿದ್ದು ಬೆಳಿಗ್ಗೆಯಿಂದ ನಾಪತ್ತೆಯಾದ ನಾಲ್ವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಲಿದ್ದಾರೆ.

 

https://www.facebook.com/105350550949710/videos/1603268693183822/?sfnsn=wiwspmo&extid=61M2w0rsAgl3cU6X&d=n&vh=e

 


Spread the love

About Laxminews 24x7

Check Also

ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Spread the loveರಾಯಚೂರು: ತುಂಗಭದ್ರಾ ನದಿಗೆ  ಸ್ನಾನಕ್ಕೆ ತೆರಳಿದ್ದ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ  ಕೊಸಗಿ ಮಂಡಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ