Breaking News

ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ  ಕಾನೂನು ರೀತಿಯಲ್ಲಿ ಅನುಮತಿ ನೀಡಿ,

Spread the love

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಜಯಂತಿಯಂದು, ಬೆಳಗಾವಿಯ ಪೀರನವಾಡಿಯಲ್ಲಿ ಅವರ ಪ್ರತಿಮೆ ತೆರವುಗೊಳಿಸಿರುವುದು ನಿಜಕ್ಕೂ ಕನ್ನಡಿಗರಿಗೆ ಆಗಿರುವ ಅಪಮಾನ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ  ಕಾನೂನು ರೀತಿಯಲ್ಲಿ ಅನುಮತಿ ನೀಡಿ, ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ  ಬೆಳಗಾವಿ ಜಿಲ್ಲಾಡಳಿತಕ್ಕೆ ಅವರು  ಮನವಿ ಮಾಡಿದ್ದಾರೆ.

ಆ. 15 ರಂದು ಬೆಳಗಿನ ಜಾವ ಕೆಲ ಯುವಕರು ಪೀರಣವಾಡಿಯ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪಿಸಿದ್ದರು. ಬಳಿಕ ಪೊಲೀಸ್ ಇಲಾಖೆ ಅದನ್ನು ತೆರವುಗೊಳಿಸಿ ವಶದಲ್ಲಿರಿಸಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ