Breaking News

ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ

Spread the love

ಚಾಮರಾಜನಗರ: ಆನ್ ಲೈನ್ ಪಾಠ ಕೇಳಲು ಪೋಷಕರು ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ.  ಸಾಗಡೆ ಗ್ರಾಮದ ರಾಜೇಶ್, ಪದ್ಮಾ ದಂಪತಿ ಮಗಳು ಹರ್ಷಿತಾ(15)  ಮೃತ ದುರ್ದೈವಿ.

ಸಾಗಡೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ  9 ನೇ ತರಗತಿ ತೇರ್ಗಡೆಯಾಗಿ 10 ನೇ ತರಗತಿಗೆ ದಾಖಲಾಗಿದ್ದಳು. ಸ್ನೇಹಿತರ ಬಳಿ ಮೊಬೈಲ್ ಇದೆ. ನನಗೂ ಮೊಬೈಲ್ ಕೊಡಿಸುವಂತೆ ಹರ್ಷಿತಾ ಪೋಷಕರಿಗೆ ಒತ್ತಾಯಿಸಿದ್ದಳು. ವೃತ್ತಿಯಲ್ಲಿ  ಟೇಲರ್ ಆಗಿರುವ ರಾಜೇಶ್ ಆರ್ಥಿಕ ಸಂಕಷ್ಟ ಹಿನ್ನೆಲೆ ಸ್ವಲ್ಪ ದಿನಗಳ ಬಳಿಕ ಮೊಬೈಲ್ ಕೊಡಿಸುವುದಾಗಿ ಭರವಸೆ ನೀಡಿದ್ದರು. 

ಇದಕ್ಕೆ ಒಪ್ಪದ ಹರ್ಷಿತಾ ಬೆಳೆಗೆ ಸಿಂಪಡಿಸುವ ಕ್ರಿಮಿನಾಶಕವನ್ನು ಸೇವಿಸಿದ್ದಾಳೆ. ತೀವ್ರ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯನ್ನು ಪ್ರಾಥಮಿಕ  ಕೇಂದ್ರ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರ ಸಲಹೆ ನೀಡಿದ್ದರು. ಅಷ್ಟರಲ್ಲಿ ಕೊನೆಯುಸಿರೆಳೆದಿದ್ದಾಳೆ.

ಮೊಬೈಲ್ ಕೊಡಿಸುವಂತೆ ಪೋಷಕರನ್ನು ಕೇಳಿದ್ದಳು. ದುಡ್ಡು ಬಂದ ನಂತರ ಕೊಡಿಸುವುದಾಗಿ ಹೇಳಿದ್ದೆ ಎಂದು ಹರ್ಷಿತಾ ತಂದೆ ದೂರು ನೀಡಿದ್ದಾರೆ. ಅದರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಚಾಮರಾಜನಗರ ಗ್ರಾಮೀಣ ಠಾಣೆ ಪಿಎಸ್ ಐ ಲೋಹಿತ್ ಕುಮಾರ್  ತಿಳಿಸಿದ್ದಾಳೆ.


Spread the love

About Laxminews 24x7

Check Also

ಸೆಪ್ಟೆಂಬರ್‌ 1 ರಿಂದ ಲಸಿಕೆ ಪಡೆಯದಿದ್ದರೆ ಪಡಿತರ, ಪಿಂಚಣಿ ತಡೆ ಹಿಡಿಯುವ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

Spread the loveಚಾಮರಾಜನಗರ : ಜಿಲ್ಲೆಯಲ್ಲಿ ಕೊರೊನಾ ಲಸಿಕೆ ವೇಗ ಹೆಚ್ಚಿಸಲು ಚಾಮರಾಜನಗರ ಜಿಲ್ಲಾಡಳಿತ ವಿಭಿನ್ನ ಅಭಿಯಾನ ಆರಂಭಿಸಿದ್ದು, ವ್ಯಾಕ್ಸಿನೇಷನ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ