Breaking News
Home / ಜಿಲ್ಲೆ / ಬೆಂಗಳೂರು / ಬೆಂಗಳೂರು ಗಲಭೆ ಪ್ರಕರಣದ ಆರೋಪಿ ಓರ್ವನಿಗೆ ಐಸಿಸ್ ನಂಟಿರುವುದು ಬೆಳಕಿಗೆ ಬಂದಿದೆ: ಪ್ರಮೋದ್ ಮುತಾಲಿಕ.

ಬೆಂಗಳೂರು ಗಲಭೆ ಪ್ರಕರಣದ ಆರೋಪಿ ಓರ್ವನಿಗೆ ಐಸಿಸ್ ನಂಟಿರುವುದು ಬೆಳಕಿಗೆ ಬಂದಿದೆ: ಪ್ರಮೋದ್ ಮುತಾಲಿಕ.

Spread the love

ಬೆಂಗಳೂರು: ಬೆಂಗಳೂರು ಗಲಭೆ ಪ್ರಕರಣದ ಆರೋಪಿ ಓರ್ವನಿಗೆ ಐಸಿಸ್ ನಂಟಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಕೂಲಂಕುಷ ತನಿಖೆ ನಡೆಸಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕ್ರಿಯೆ ನೀಡಿರುವ ಮುತಾಲಿಕ್, ಬೆಂಗಳೂರು ಗಲಭೆಯಂತಹ ಸಾಕಷ್ಟು ಪ್ರಕ್ರಿಯೆಗಳು ನಮ್ಮ ರಾಜ್ಯದಲ್ಲಿ ನಡೆದಿದೆ. ಗಲಭೆ ಪ್ರಕರಣದ ಆರೋಪಿಯೊಬ್ಬನಿಗೆ ಐಸಿಸ್ ನಂಟು ಇದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ತನಿಖೆಯಾಗಬೇಕಿದೆ ಎಂದರು.

ಬೆಂಗಳೂರಿನಲ್ಲಿ ಗಲಾಟೆಗಳು ನಡೆದ ಬಳಿಕ ಮಾತ್ರವೇ ಸರ್ಕಾರ, ಪೊಲೀಸರು ಮತ್ತು ಗುಪ್ತಚರ ಇಲಾಖೆ ಜಾಗೃತ ಆಗುತ್ತದೆ. ಆದರೆ ನಿತ್ಯ 24 ಗಂಟೆಯೂ ಸರ್ಕಾರ, ಪೊಲೀಸರು ಮತ್ತು ಗುಪ್ತಚರ ಇಲಾಖೆ ಕಣ್ಣು, ಕಿವಿ ತೆರೆದು ಕೆಲಸ ಮಾಡಬೇಕಿದೆ. ಇಂಥಹ ಧಂಗೆಕೋರರನ್ನು ಹದ್ದುಬಸ್ತಿನಲ್ಲಿಡಬೇಕಿದೆಎಂದು ಹೇಳಿದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ