Breaking News

ಒಂದು ವರ್ಷ ವಾದರೂ ಇನ್ನೂ ಸಿಕ್ಕಿಲ್ಲ ಪರಿಹಾರ

Spread the love

ಬೆಳಗಾವಿ: ಕಳೆದ ವರ್ಷದ ನೆರೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಪರಿಹಾರ ವಿತರಿಸುವಂತೆ ಆಗ್ರಹಿಸಿ ಮೂಡಲಗಿ ತಾಲೂಕಿ ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಅವರಾದಿ ಗ್ರಾಮದ  ನೆರೆ ಸಂತ್ರಸ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಕಳೆದ ವರ್ಷ ಭೀಕರ ಪ್ರವಾಹದಿಂದ ಅವರಾದಿ ಗ್ರಾಮದ ದಂಡಪ್ಪನವರ ತೋಟ, ದೊಂಬರ ತೋಟ,  ಉರಬಿ ತೋಟ, ಮಾಡಲಗಿಯವರ ತೋಟ ಸೇರಿ  ಸುಮಾರು 75  ಮನೆಗಳು ಹಾನಿಗೊಳಗಾಗಿವೆ.  ಸರ್ಕಾರ ಘೋಷಣೆ ಮಾಡಿದ 10 ಸಾವಿರ ಪರಿಹಾರ. ವರ್ಷ ಕಳೆದರು ನಮಗೆ ತಲುಪಿಲ್ಲ. ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಮತ್ತೆ ಇದೀಗ ಪ್ರವಾಹ ಭೀತಿ ಎದುರಾಗಿದ್ದು, ಕೂಡಲೇ ಪರಿಹಾರ ವಿತರಿಸುವಂತೆ ಸಂತ್ರಸ್ತರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಉದ್ದವ ಯಲ್ಲಪ್ಪ ಡೊಂಬರ, ಮುತ್ತಪ್ಪ ಡೊಂಬರ,  ಚನ್ನಪ್ಪ ಹುನ್ನೂರ,  ಲಕ್ಕಪ್ಪ ಗೇಟಿನ, ಹಾಲಪ್ಪ ದುಂಡಪ್ಪ ಗೇಟಿನ, ಹುಸೇನಸಾಬ ಬಾಗವಾನ್,  ಮಾನಿಂಗ ಕಾಸರ, ಚನ್ನಪ್ಪ ಹೋಳಿ, ಶಂಕರೆಪ್ಪ ಪಾಟೀಲ್ , ವಿನಯಕ ಬಾಗೇವಾಡಿ ಸೇರಿದಂತೆ ಮುಂತಾದವರು ಇದ್ದರು.


Spread the love

About Laxminews 24x7

Check Also

ಮತದಾರರ ಪಟ್ಟಿ ಪರಿಷ್ಕರಣೆಗೆ ಎಲ್ಲರೂ ಸಹಕರಿಸಿ: ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಿ: ಡಾ. ವೀರಣ್ಣ ಚರಂತಿಮಠ

Spread the loveಬಾಗಲಕೋಟೆ: ಪ್ರತಿಯೊಬ್ಬರೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬಲಿಷ್ಠ ಪ್ರಜಾತಂತ್ರ ನಿರ್ಮಾಣಕ್ಕೆ ಕೈಜೋಡಿಸಬೇಕು” ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ