Breaking News

ತರಬೇತಿ ಸಮಯದಲ್ಲಿ ತಲೆಗೆ ಪೆಟ್ಟು ಬಿದ್ದು ಯೋಧ ಸಾವು

Spread the love

ಧಾರವಾಡ, ಫೆ.24-ಭಾರತೀಯ ಸೇನೆಯ ತರಬೇತಿಯ ಸಮಯದಲ್ಲಿ ತಲೆಗೆ ಬಲವಾದ ಏಟು ಬಿದ್ದು, ಯೋಧನೊಬ್ಬ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗಪುರ ಸೇನಾ ಕ್ಯಾಂಪ್‍ನಲ್ಲಿ ನಡೆದಿದೆ. ಧಾರವಾಡ ತಾಲೂಕಿನ ನಿಗದಿ ಗ್ರಾಮದ ಮಹೇಶ್ ಸಿಂಗನಹಳ್ಳಿ (20) ಮೃತಪಟ್ಟ ಯೋಧ.

ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ಸೇನೆಗೆ ಸೇರಿದ್ದ ಇವರು ತಂದೆ-ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯನ್ನು ಅಗಲಿದ್ದಾರೆ. ಇಂದು ಯೋಧನ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ಆಗಮಿಸಲಿದ್ದು, ಯೋಧನ ಅಗಲಿಕೆಯಿಂದ ಗ್ರಾಮದಲ್ಲಿ ನೀರವ ಮೌನ ಮನೆ ಮಾಡಿದೆ. ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ