Breaking News

ಆಗಸ್ಟ್ 22ರಿಂದ ಮದ್ಯ ಮಾರಾಟ ನಿಷೇಧ: d.c…

Spread the love

ಧಾರವಾಡ: ಅಗಸ್ಟ್ 22ರಿಂದ ಸೆಪ್ಟಂಬರ್ 4ರವರೆಗೆ ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಧಾರವಾಡ ಜಿಲ್ಲೆಯ ನಗರ ಮತ್ತು ಗ್ರಾಮಗಳಲ್ಲಿ ಗಣೇಶ ವಿಗ್ರಹಗಳ ವಿಸರ್ಜನಾ ನಡೆಯುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(1) ಕಾಯ್ದೆಯಡಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಸಮಾರಂಭ, ಸಂಗೀತ, ನೃತ್ಯ, ಮುಂತಾದ ಮನರಂಜನಾ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ.ಗಣೇಶ ಮೂರ್ತಿಯನ್ನು ತಮ್ಮ ಮನೆಯ ಆವರಣದಲ್ಲಿ, ನೀರಿನ ಬ್ಯಾರಲ್, ಬಕೆಟ್‍ಗಳಲ್ಲಿ ವಿಸರ್ಜನೆ ಮಾಡಬೇಕು. ಯಾವುದೇ ರೀತಿಯಾಗಿ ಜನ ಸಂದಣಿ ಉಂಟು ಮಾಡಬಾರದು. ಭಕ್ತಾದಿಗಳಿಗೆ ಸ್ಯಾನಿಟೈಸರ್, ಮಾಸ್ಕ್ ಧರಿಸಲು ಸೂಚಿಸಬೇಕು, ಸಾಮಾಜಿಕ ಅಂತರ ಕಾಯ್ದು ಕೊಳ್ಳಬೇಕು, ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ