Breaking News

ಸೋಂಕಿತರ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸದೃಢತೆಗಾಗಿ ಪ್ರತೀ ದಿನ ಯೋಗ ತರಬೇತಿ ನೀಡಲಾಗುತ್ತಿದೆ.

Spread the love

ರಾಯಚೂರು: ಕೋವಿಡ್ ಕೇರ್ ಸೆಂಟರ್ ಅಂದ್ರೆ ಅವ್ಯವಸ್ಥೆಗಳ ಆಗರ ಅನ್ನೋದಕ್ಕೆ ಸಾಕಷ್ಟು ಉದಾಹರಣೆಗಳು ಇವೆ. ಆದರೆ ರಾಯಚೂರಿನ ಸಿಂಧನೂರು ನಗರದ ಕೋವಿಡ್ ಕೇರ್ ಸೆಂಟರ್ ಇದಕ್ಕೆ ಅಪವಾದ ಎಂಬಂತೆ ಉತ್ತಮ ಸೇವೆ ನೀಡುತ್ತಿದೆ. ಕೇಂದ್ರದಲ್ಲಿರುವ ಸೋಂಕಿತರ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸದೃಢತೆಗಾಗಿ ಪ್ರತೀ ದಿನ ಯೋಗ ತರಬೇತಿ ನೀಡಲಾಗುತ್ತಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ತರಬೇತಿಗಳನ್ನ ನೀಡಿರುವ ಸಿಂಧನೂರು ಮೂಲದ ಯೋಗಗುರು ಮಲ್ಲಣ್ಣ ಸೋಂಕಿತರಿಗೆ ಯೋಗ ಕಲಿಸುತ್ತಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 72 ಜನರಿದ್ದು ಎಲ್ಲಿರಗೂ ಬೆಳಗ್ಗೆ 6:30ಕ್ಕೆ ಯೋಗ ಹೇಳಿ ಕೊಡಲಾಗುತ್ತಿದೆ.

ತರಬೇತಿ ಜೊತೆ ಊಟ, ಸ್ವಚ್ಛತೆಗೆ ಯಾವುದೇ ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗುತ್ತಿದೆ. ಇಲ್ಲಿರುವವರ ಮನೋರಂಜನೆಗೂ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಇಲ್ಲಿ ದಾಖಲಾಗಿರುವ ಸೋಂಕಿತರು ಯಾವುದೇ ಭೀತಿಯಿಲ್ಲದೆ ತಮ್ಮ ಕ್ವಾರಂಟೈನ್ ಅವಧಿ ಕಳೆಯುತ್ತಿದ್ದಾರೆ.


Spread the love

About Laxminews 24x7

Check Also

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ.

Spread the love ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ. ಬೆಂಗಳೂರು : …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ