Breaking News

ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಬ್ಯಾಂಕ್ ನೌಕರನೊಬ್ಬ ಬ್ಯಾಂಕ್‍ನಲ್ಲಿಯೇ ವಿಷಸೇವಿಸಿ ಆತ್ಮಹತ್ಯೆ

Spread the love

ಬಳ್ಳಾರಿ: ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ ಬಳಿಕ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಬ್ಯಾಂಕ್ ನೌಕರನೊಬ್ಬ ಬ್ಯಾಂಕ್‍ನಲ್ಲಿಯೇ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹೊಸಪೇಟೆಯ ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‍ನಲ್ಲಿ ನಡೆದಿದೆ.

ಮೃತ ಬ್ಯಾಂಕ್ ನೌಕರ ಮಹೇಶ್ ಎಂದು ತಿಳಿದುಬಂದಿದೆ. ಮಹೇಶ್ ಬ್ಯಾಂಕ್‍ನಲ್ಲಿ ಲೀಗಲ್ ಅಡ್ವೈಸರ್ ಆಗಿ ಕೆಲಸ ಮಾಡುತ್ತಿದ್ದು, ಲಾಕ್‍ಡೌನ್ ಹಿನ್ನೆಲೆಯಲ್ಲಿ ಬಿಸಿನೆಸ್ ಇಲ್ಲದ ಕಾರಣ ಸರಿಯಾದ ದಾಖಲೆ ಇಲ್ಲದಿದ್ದರೂ ಲೋನ್ ನೀಡುವಂತೆ ಅಧಿಕಾರಿಗಳು ಒತ್ತಡ ಹೇರುತ್ತಿದ್ದರಂತೆ. ಈ ಹಿನ್ನೆಲೆಯಲ್ಲಿ ಬೇಸತ್ತು ಬ್ಯಾಂಕ್‍ನಲ್ಲೇ ವಿಷ ಸೇವಿಸಿ ಮಹೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

 

ಘಟನೆ ಕುರಿತುಮಾತನಾಡಿದ ಮಹೇಶ್ ಸಹೋದರ, ನನ್ನ ಸಹೋದರನಿಗೆ ಎಷ್ಟು ಹಿಂಸೆ ನೀಡಿದ್ದಾರೆ ಎಂಬ ಬಗ್ಗೆ ನಮ್ಮ ಬಳಿ ಎಂದು ಹೇಳಿಕೊಂಡಿರಲಿಲ್ಲ. ಒಂದೊಮ್ಮೆ ಹೇಳಿದ್ದೆ ಕೆಲಸ ಬಿಟ್ಟು ಬಾ ಎಂದು ಹೇಳುತ್ತಿದೆ. ಆದರೆ ವಿಡಿಯೋ ಮಾಡಿ ಆತ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಪ್ರಕರಣ ದಾಖಲಿಸುತ್ತೇವೆ. ನನ್ನ ಬಳಿ ಇರುವ ಸಾಕ್ಷಿಗಳನ್ನು ಪೊಲೀಸರು ಕೇಳಿದ್ದಾರೆ. ಈಗ ಏನು ಮಾಡಿದರೂ ನನ್ನ ಸಹೋದರನನ್ನು ಕಳೆದುಕೊಂಡಿದ್ದು, ಆತನಿಗೆ ಇಬ್ಬರು ಸಣ್ಣ ಮಕ್ಕಳಿದ್ದಾರೆ. ನಕಲಿ ಖಾತಾ ಇಟ್ಟು ಬ್ಯಾಂಕ್‍ನಲ್ಲಿ ಸಾಲ ಪಡೆಯುತ್ತಿದ್ದ ವಿರುದ್ಧ ಮಾತನಡಿದ್ದರು ಅಷ್ಟೇ ಎಂದು ವಿವರಿಸಿದ್ದಾರೆ.

 

ಮೇಲಾಧಿಕಾರಿಗಳು ಯಾವುದೇ ದಾಖಲೆ ಇಲ್ಲದೇ ಸಾಲ ನೀಡಲು ಒತ್ತಡ ಹಾಕಿದ್ದೆ ಆತ್ಮಹತ್ಯೆಗೆ ಕಾರಣ ಎಂದು ಸದ್ಯ ಕುಟುಂಬಸ್ಥರು ಆರೋಪಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೇತ್ ನೋಟ್ ಬರೆದಿಟ್ಟಿರುವ ಬಗ್ಗೆ ಮಾಹಿತಿ ಇದೆ. ಡೇತ್ ನೋಟ್ ಅನ್ವಯ ಪ್ರಕರಣ ದಾಖಲಿಸಲಾಗುವುದು. ಬ್ಯಾಂಕ್‍ನಲ್ಲಿ ಬಹುದೊಡ್ಡ ಹಗರಣವೇ ನಡೆದಿರುವ ಅನುಮಾನವಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.


Spread the love

About Laxminews 24x7

Check Also

ಎಲೆ ಮರೆಯಲ್ಲಿ ಬೆತ್ತಲಾದ ನಟಿ

Spread the loveಬಾಲಿವುಡ್ ಮತ್ತು ಟಾಲಿವುಡ್ ಸಿನಿಮಾ ಮೂಲಕ ಕಿಯಾರಾ ಅಡ್ವಾಣಿ ಅಭಿಮಾನಿಗಳ ಮನಗೆದ್ದಿದ್ದಾರೆ. ಕಿಯಾರಾ ಸೋಶಿಯಲ್ ಮೀಡಿಯಾದಲ್ಲಿ ಆಯಕ್ಟಿವ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ