Breaking News

ಪೀರನವಾಡಿಯ ಬಳಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಕರವೇ ಮನವಿ

Spread the love

ಪೀರನವಾಡಿಯ ಬಳಿ ಸಂಗೊಳ್ಳಿರಾಯಣ್ಣ ಪ್ರತಿಮೆ ಸ್ಥಾಪನೆಗೆಆಗ್ರಹಿಸಿ ಮುಖ್ಯಮಂತ್ರಿಗಳಿಗೆ
ಕರವೇ ಮನವಿ

ಬೆಳಗಾವಿ ಬಳಿಯಿರುವ ಪೀರನವಾಡಿ ಬಳಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ
ಸ್ಥಾಪನೆಗಿರುವ ತಾಂತ್ರಿಕ ಅಡಚಣಿಗಳನ್ನು ನಿವಾರಿಸಿ ಪ್ರತಿಮೆ ಸ್ಥಾಪಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು ಇಂದು ಮಂಗಳವಾರ ಮುಂಜಾನೆ ಬೆಳಗಾವಿಯಲ್ಲಿ ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.

ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ,ರಾಜ್ಯ ಸಂಚಾಲಕ ಮಹಾದೇವ ತಳವಾರ ಅವರ ನೇತೃತ್ವದಲ್ಲಿ ನಿಯೋಗವೊಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರನ್ನು ಭೆಟ್ಟಿಯಾಗಿ ಮನವಿ ಸಲ್ಲಿಸಿತು.
ಕನ್ನಡ ಸಂಘಟನೆಗಳು ಪೀರನವಾಡಿ ಬಳಿ ಪ್ರತಿಮೆ ಸ್ಥಾಪಿಸಲು ಯತ್ನಿಸಿದಾಗ ಪೋಲೀಸರು ಅದನ್ನು ವಿಫಲಗೊಳಿಸಿದ್ದು ಖಂಡನಾರ್ಹವೆಂದು ಮನವಿಯಲ್ಲಿ ಹೇಳಲಾಗಿದೆ.

 


Spread the love

About Laxminews 24x7

Check Also

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.

Spread the love ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ