ಹು-ಧಾ ಮಹಾನಗರ ಪೊಲೀಸ ಆಯುಕ್ತರನ್ನು ಅಮಾನತು ಮಾಡಿ:ಅಣ್ವೇಕರ ಆಗ್ರಹ
ಹುಬ್ಬಳ್ಳಿ:ಪಾಕ್ ಪರ ಘೋಷಣೆ ಕೂಗಿದ ದೇಶದ್ರೋಹದ ಪ್ರಕರಣದಲ್ಲಿ ಹು-ಧಾ ಮಹಾನಗರ ಪೊಲೀಸ ಆಯುಕ್ತ ಮೃಧುಧೋರಣೆ ಅನುಸರಿಸುತ್ತಿರುವುದು ಖಂಡನೀಯವಾಗಿದೆ.ಕೂಡಲೇ ಪೊಲೀಸ ಆಯುಕ್ತರನ್ನು ಅಮಾನತು ಮಾಡಬೇಕು ಎಂದು ಯುವ ವಕೀಲರ ಸಂಘದ ಮುಖಂಡ ಅಶೋಕ ಅಣ್ವೇಕರ ಹೇಳಿದರು.
ನಗರದಲ್ಲಿಂದು ಪ್ರತಿಭಟನೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ದೇಶದ್ರೋಹದ ಪ್ರಕರಣದಲ್ಲಿ ಪೊಲೀಸ ಆಯುಕ್ತರು ಮೃಧುಧೋರಣೆ ಅನುಸರಿಸುವ ಮೂಲಕ ದೇಶದ್ರೋಹದ ಆರೋಪಿತರಿಗೆ ರಕ್ಷಣೆ ನೀಡಿರುವುದು ಖಂಡನೀಯವಾಗಿದೆ.
ರಾಜ್ಯದಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಪೊಲೀಸ ಇಲಾಖೆಯ ನಡೆಯೇ ಕಾರಣವಾಗಿದೆ ಎಂದರು.
ಹುಬ್ಬಳ್ಳಿಯಲ್ಲಿ ನಡೆದಿರುವ ದೇಶದ್ರೋಹದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಹು-ಧಾ ಮಹಾನಗರ ಪೊಲೀಸ ಆಯುಕ್ತರನ್ನು ಅಮಾನತು ಮಾಡಬೇಕು ಎಂದು ಅವರು ಹೇಳಿದರು.
Laxmi News 24×7