Breaking News

ಯುಪಿಎಸ್‍ಸಿ ಪರೀಕ್ಷೆಯಲ್ಲಿ ಟಾಪರ್ ಇಂದು ಬಳ್ಳಾರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕಾರ…..

Spread the love

ಬಳ್ಳಾರಿ: ಯುಪಿಎಸ್‍ಸಿ ಪರೀಕ್ಷೆಯಲ್ಲಿ ಇಡೀ ದೇಶಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿರುವ ನಂದಿನಿ ಕೆ.ಆರ್. ಅವರು ಇಂದು ಬಳ್ಳಾರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಮೂಲತಃ ಕೋಲಾರ ಜಿಲ್ಲೆಯ ಕೆಂಬೋಡಿ ಗ್ರಾಮದವರಾದ ನಂದಿನಿ ಅವರು, 2016ರ ಬ್ಯಾಚ್‍ನ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಟಾಪರ್ ಆಗಿ ಉತ್ತೀಣರಾಗಿದ್ದರು. ಈ ಮೂಲಕ ಇಡೀ ದೇಶದ ಗಮನ ಸೆಳೆದಿದ್ದರು. ಕಡುಬಡತನದ ಹಿನ್ನೆಲೆಯಲ್ಲಿ ಬಂದ ನಂದಿನಿ ಅವರು ಇದೀಗ ಬಳ್ಳಾರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರೋದು ಜಿಲ್ಲೆಯ ಹೆಮ್ಮೆಯ ಸಂಗತಿಯಾಗಿದೆ.

ಐಎಎಸ್ ಪರೀಕ್ಷೆಯಲ್ಲಿ ಟಾಪರ್ ಆಗಿ ಆಯ್ಕೆಯಾಗಿರುವ ನಂದಿನಿ ಅವರಿಗೆ ಮುಂಚೂಣಿಯಾಗಿ ಸಿಇಒ ಹುದ್ದೆಯನ್ನ ಅಲಂಕರಿಸಲು ಬಳ್ಳಾರಿ ಜಿಲ್ಲಾ ಪಂಚಾಯಿತಿ ಒಂದು ರೀತಿಯ ಸ್ಫೂರ್ತಿದಾಯಕವಾಗಿದೆ. ಈ ಹಿಂದೆ ಬಳ್ಳಾರಿ ಜಿಲ್ಲಾ ಪಂಚಾಯಿತಿ ಸಿಇಓ ಆಗಿ ಕೆ.ನಿತೀಶ್ ಅವರು ಆಯ್ಕೆಯಾಗಿದ್ದರು. ನಿತೀಶ್ ಅವರ ಹಿಂದೆ ಸಿಇಓ ಆಗಿ ಆಯ್ಕೆಯಾಗಿದ್ದ ಡಾ.ಕೆ.ವಿ.ರಾಜೇಂದ್ರ ಅವರ ಕಾರ್ಯವೈಖರಿ ಜನಮನ್ನಣೆ ಗಳಿಸಿತ್ತು. ಇದೀಗ ನಂದಿನಿ ಅವರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.


Spread the love

About Laxminews 24x7

Check Also

ಬಳ್ಳಾರಿಯಲ್ಲಿ ಉತ್ಖನನ ವೇಳೆ 3,000 ವರ್ಷಗಳಷ್ಟು ಹಳೆಯ ಮಾನವನ ಪಳೆಯುಳಿಕೆ ಪತ್ತೆ

Spread the loveಬಳ್ಳಾರಿ: ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ಉತ್ಖನನ ವೇಳೆ 3,000 ವರ್ಷದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ