Breaking News

ಕರ್ನಾಟಕದ ಪಡಿತರ ಅಕ್ಕಿ ಕೇರಳಕ್ಕೆ- ಐವರು ಖದೀಮರ ಅರೆಸ್ಟ್

Spread the love

ಉಡುಪಿ: ಕರ್ನಾಟಕದ ಉಚಿತ ಪಡಿತರ ಅಕ್ಕಿಯನ್ನು ಸಂಗ್ರಹಿಸಿ ಕೇರಳಕ್ಕೆ ಸಾಗಿಸುವ ದಂಧೆಯ ಮೇಲೆ ಉಡುಪಿ ಡಿಸಿಐಬಿ ಪೊಲೀಸರು ದಾಳಿ ಮಾಡಿದ್ದಾರೆ. ಸರ್ಕಾರ ಉಚಿತವಾಗಿ ಬಡವರಿಗೆ ಕೊಡುವ ಉಚಿತ ಅಕ್ಕಿಯನ್ನು ಕೇರಳಕ್ಕೆ ಸಾಗಿಸುವ ಐವರು ಚೋರರ ಬಂಧನವಾಗಿದೆ.

ಬಡವರು ಹಸಿದಿರಬಾರದು. ಮೂರೊತ್ತು ಊಟ ಮಾಡಬೇಕೆಂದು ಸರ್ಕಾರ ಉಚಿತ ಅಕ್ಕಿ ವಿತರಿಸುತ್ತಿದೆ. ಆದ್ರೆ ಸರ್ಕಾರದ ಅಕ್ಕಿ ಪಡೆದು ಕೆಲವರು ಅದನ್ನು ದಂಧೆಕೋರರಿಗೆ ಮಾರಾಟ ಮಾಡಿ ದ್ರೋಹ ಬಗೆಯುತ್ತಿದ್ದಾರೆ. ಇಂತಹ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.

ಉಡುಪಿಯಲ್ಲಿ ಡಿಸಿಐಬಿ ಪೊಲೀಸರು ಮಿಂಚಿನ ಕಾರ್ಯಾಚರಣೆ ಮಾಡಿದ್ದು, ಅಕ್ಕಿ ಸಂಗ್ರಹ ಮತ್ತು ಕೇರಳಕ್ಕೆ ಮಾರಾಟ ಮಾಡುವ ದಂಧೆಗೆ ಬಲೆ ಬೀಸಿದ್ದಾರೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಕೋಟೇಶ್ವರದ ಅಕ್ರಮ ಅಕ್ಕಿ ದಾಸ್ತಾನು ಗೋಡಾನ್ ನಲ್ಲಿ ಸಂಗ್ರಹಿಸಿ ಇಟ್ಟಿದ್ದ 55 ಟನ್ ಅಂದ್ರೆ 55 ಸಾವಿರ ಕಿಲೋ ಅಕ್ಕಿಯನ್ನು ಸುಪರ್ದಿಗೆ ಪಡೆದಿದ್ದಾರೆ.


Spread the love

About Laxminews 24x7

Check Also

ನಗರಸಭೆಯ ಆಸ್ತಿ ತೆರಿಗೆ ಹಣ ದುರ್ಬಳಕೆ: ಇಬ್ಬರ ಬಂಧನ

Spread the loveಉಡುಪಿ: ನಗರಸಭೆಯ ಆಸ್ತಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿ ಸರಕಾರಕ್ಕೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ