Breaking News

ಶಾಲಾ ಆವರಣದಲ್ಲಿ ಭೂ ಕುಸಿತವಾಗಿದ್ದು, ಭಾರೀ ಅನಾಹುತವೊಂದು ತಪ್ಪಿರುವ ಘಟನೆ

Spread the love

ಗದಗ: ಶಾಲಾ ಆವರಣದಲ್ಲಿ ಭೂ ಕುಸಿತವಾಗಿದ್ದು, ಭಾರೀ ಅನಾಹುತವೊಂದು ತಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ನಗರದ ವೀರನಾರಾಯಣ ದೇವಸ್ಥಾನದ ಬಳಿಯ ಸರ್ಕಾರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆ ನಂಬರ್ 02 ಆವರಣದಲ್ಲಿ ಭೂ ಕುಸಿತವಾಗಿದೆ. ಶಾಲೆಗಳು ರಜೆ ಇರುವುದರಿಂದ ಭಾರೀ ಅನಾಹುತ ತಪ್ಪಿದೆ. ಸುಮಾರು 30 ಅಡಿ ಭೂ ಕುಸಿತವಾಗಿದೆ. ಶಿಕ್ಷಕರು ಹಾಗೂ ಸ್ಥಳೀಯರು ಶಾಲೆಗೆ ಬಂದಾಗ ಈ ಘಟನೆ ನೋಡಿ ಆತಂಕಗೊಂಡಿದ್ದಾರೆ

ವೀರನಾರಾಯಣ ದೇವಸ್ಥಾನ ಬಳಿ ಅಲ್ಲಲ್ಲಿ ಆಗಾಗ ಭೂ ಕುಸಿತವಾಗುತ್ತಿದೆ. ಇವು ಧಾನ್ಯಗಳನ್ನು ಸಂಗ್ರಹಿಸುವ ಕಣಜನಾ? ಅಥವಾ ರಾಜ ಮಹಾರಾಜರ ಸುರಂಗ ಮಾರ್ಗನಾ? ಎಂದು ಪ್ರಶ್ನಿಸಿದರು. ಯಾಕೆ ಪದೇ ಪದೇ ಭೂಕುಸಿತವಾಗುತ್ತಿದೆ ಎಂಬುದರ ಬಗ್ಗೆ ತನಿಖೆ ಮಾಡಬೇಕು. ಭೂ ಕುಸಿತವಾದ ಪ್ರದೇಶಕ್ಕೆ ಕೂಡಲೆ ಮಣ್ಣು ಹಾಕುವಂತೆ ಸ್ಥಳೀಯರು ಒತ್ತಾಯ ಮಾಡಿದ್ದಾರೆ.

ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಪದೇ ಪದೇ ಭೂ ಕುಸಿತವಾಗುತ್ತಿದ್ದು, ಅಲ್ಲಿನ ಜನರು ನಿತ್ಯ ಭಯದಲ್ಲಿ ಜೀವನ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಈಗ ಗದಗ ನಗರದಲ್ಲಿ ಭೂ ಕುಸಿತವಾಗಿರೋದು ಜನರನ್ನು ಇನಷ್ಟು ಭಯಪಡುವಂತೆ ಮಾಡಿದೆ. ಗಣಿ ಮತ್ತು ವಿಜ್ಞಾನ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಸೂಕ್ತವಾದ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಕಾರವಾರ: ಪಹಲ್ಗಾಮ್ ದಾಳಿಗೆ ಮರುಗಿದ ಪುಟಾಣಿಗಳು; ಸ್ಕೇಟಿಂಗ್, ಮೊಂಬತ್ತಿ ಹಿಡಿದು ಶ್ರದ್ಧಾಂಜಲಿ

Spread the loveಕಾರವಾರ (ಉತ್ತರಕನ್ನಡ): ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಬಲಿಯಾದ ಪ್ರವಾಸಿಗರ ಆತ್ಮಕ್ಕೆ ಶಾಂತಿ ಕೋರಿ ಎರಡು ಗಂಟೆಗಳ ಕಾಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ