Breaking News

11 ಹೊಸ ಏತ ನೀರಾವರಿ ಯೋಜನೆ ಗಳನ್ನು ಜಾರಿಗೊಳಿಸುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌

Spread the love

ಬೆಳಗಾವಿ: ಜಿಲ್ಲೆಗೆ 11 ಹೊಸ ಏತ ನೀರಾವರಿ ಯೋಜನೆ ಗಳನ್ನು ಜಾರಿಗೊಳಿಸುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರ ಪ್ರಸ್ತಾಪಗಳಿಗೆ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮ ನಿಯಮಿತವು ಅನುಮತಿ ನೀಡಿದೆ.

ನಿನ್ನೆ ನಡೆದ ನಿಗಮದ ಅಂದಾಜು ಪರಿಶೀಲನಾ ಸಭೆಯಲ್ಲಿ ಈ 11 ಏತ ನೀರಾವರಿ ಯೋಜನೆ ಗಳ ಅನುಷ್ಠಾನಕ್ಕೆ ಸಂಬಂಧಿಸಿ ಚರ್ಚೆ ನಡೆಸಿ, ಈ ಯೋಜನೆಗಳಿಗೆ ಅವಶ್ಯವಿರುವ 9.91 ಟಿಎಂಸಿ ನೀರನ್ನು ಹಂಚಿಕೆ‌ ಮಾಡಲು ಸಹಾ  ಅನುಮೋದನೆ ನೀಡಲಾಗಿದೆ.

ಹಾಗೆಯೇ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲ್ಲೂಕುಗಳಲ್ಲಿ ಅನುಷ್ಠಾನಕ್ಕೆ ತರಲಾಗುವ ವಿವಿಧ 7 ನೀರಾವರಿ ಯೋಜನೆ ಗಳಿಗೂ ಸಹಾ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮದ ಅಂದಾಜು ಪರಿಶೀಲನಾ ಸಭೆ ಅನುಮತಿ ನೀಡಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ