Breaking News

ಇಂದಿನಿಂದ ಅನ್‍ಲಾಕ್ 4.0 ಜಾರಿ – ವ್ಯಾಪಾರಕ್ಕೆ ಮುಕ್ತವಾಯ್ತು ಕೆ.ಆರ್ ಮಾರ್ಕೆಟ್

Spread the love

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ ಕೆ.ಆರ್ ಮಾರ್ಕೆಟ್ ನಲ್ಲಿ ವ್ಯಾಪಾರ ಮತ್ತೆ ಆರಂಭವಾಗಿದೆ.

ಮಹಾಮಾರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕೆ.ಆರ್ ಮಾರ್ಕೆಟ್ ನಲ್ಲಿ ವ್ಯಾಪಾರ- ವ್ಯವಹಾರ ಕಳೆದ ಐದು ತಿಂಗಳಿನಿಂದ ಸ್ಥಗಿತಗೊಂಡಿತ್ತು. ಮಾರ್ಕೆಟ್ ನ ಮಳಿಗೆಗಳಲ್ಲಿ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಿಲಾಗಿತ್ತು. ಬೀದಿ ಬದಿಯ ವ್ಯಾಪಾರಕ್ಕೆ ಅವಕಾಶವಿರಲಿಲ್ಲ.

ಇದೀಗ ಇಂದಿನಿಂದ ಅನ್‍ಲಾಕ್ 4.0 ಜಾರಿಯಾಗುತ್ತಿದ್ದು, ಕೆ.ಆರ್ ಮಾರ್ಕೆಟ್ ಬೀದಿ ಬದಿಯ ವ್ಯಾಪರ ಬಲು ಜೋರಾಗಿದೆ. ಮಾರ್ಕೆಟ್ ಹೊರಗಡೆ ಸಾಮಾಜಿಕ ಅಂತರ ಮರೆತು ಕಿಕ್ಕಿರಿದ ಜನ ಸಂದಣಿಯ ಮಧ್ಯೆ ಭರ್ಜರಿ ವ್ಯಾಪಾರ ನಡೆಯುತ್ತಿದೆ.

ಇತ್ತ ಮದ್ಯಪ್ರಿಯರಿಗೆ ಶುಭ ಮಂಗಳವಾರ ಎಂದೇ ಹೇಳಬಹುದು. ಇಂದಿನಿಂದ ಪಬ್, ರೆಸ್ಟೋರೆಂಟ್ ತೆರೆಯಲು ಗ್ರೀನ್ ಸಿಗ್ನಲ್ ಸಿಕ್ಕಿದೆ. ಕಳೆದ ಐದು ತಿಂಗಳಿಂದ ಬಾರ್, ರೆಸ್ಟೋರೆಂಟ್ ಇಲ್ಲದೆ ಮದ್ಯಪ್ರಿಯರು ಕಂಗಾಲಾಗಿದ್ದರು. ರಾಜ್ಯ ಅಬಕಾರಿ ಇಲಾಖೆ ಕೂಡ ಬಾರ್, ರೆಸ್ಟೋರೆಂಟ್, ಪಬ್ ಗಳಿಗೆ ಅನುಮತಿ ನೀಡಿದೆ. ಸದ್ಯ ಇಂದಿನಿಂದ ಬಾರ್, ಪಬ್, ರೆಸ್ಟೋರೆಂಟ್ ಇರಲಿದ್ದು, ಟೇಬಲ್ ಸರ್ವಿಸ್ ಕೂಡ ಇರಲಿದೆ.

ಸಾಮಾಜಿಕ ಅಂತರ, ಟೇಬಲ್ ನಲ್ಲಿ ನಿಗದಿತ ಮಂದಿ ಕುಳಿತುಕೊಳ್ಳಲು ಅವಕಾಶ ನೀಡಲಾಗುತ್ತಿದೆ. ರೆಸ್ಟೋರೆಂಟ್ ಗಳಲ್ಲಿ ಸರ್ವಿಸ್ ನೀಡುವ ಮಂದಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಕಡ್ಡಾಯವಾಗಿದೆ.


Spread the love

About Laxminews 24x7

Check Also

ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ದಿನೇಶ್ ಗುಂಡೂರಾವ್

Spread the loveಬೆಂಗಳೂರು: ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್ ರಚನೆ  ಆಗಲಿ ಎಂದು ಸಚಿವ ದಿನೇಶ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ