Breaking News

ಇತರರು ತಲೆಹಾಕುವುದು ಸರಿಯಲ್ಲ’: ಅರ್ಚಕ ನಾರಾಯಣ ಆಚಾರ್‌ ಪುತ್ರಿಯರ ವಿವಾಹ ವಿಚಾರ

Spread the love

ಮಡಿಕೇರಿ: ‘ತಲಕಾವೇರಿಯಲ್ಲಿ, ಗುಡ್ಡ ಕುಸಿತದಿಂದ ಮೃತಪಟ್ಟ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಆಚಾರ್‌ ಅವರ ಪುತ್ರಿಯರು ಅನ್ಯಧರ್ಮದ ಯುವಕರನ್ನು ಮದುವೆ ಆಗಿದ್ದಾರೆ. ಆದರೆ, ಅವರ ವೈಯಕ್ತಿಕ ವಿಚಾರದಲ್ಲಿ ಬೇರೆಯವರು ತಲೆಹಾಕುವುದು ಸರಿಯಲ್ಲ’ ಎಂದು ಕುಟುಂಬದ ಹಿರಿಯ ಸದಸ್ಯ ಜಯಪ್ರಕಾಶ್‍ ರಾವ್‌ ಸೋಮವಾರ ಇಲ್ಲಿ ಅಭಿಪ್ರಾಯಪಟ್ಟರು.

‘ಅನ್ಯಧರ್ಮದ ಯುವಕರನ್ನು ಮದುವೆ ಆಗಿದ್ದರೂ, ಹಿಂದೂ ಧರ್ಮದ ಆಚಾರ- ವಿಚಾರ ಪಾಲಿಸುತ್ತಾ ಬಂದಿದ್ದಾರೆ. ಮದುವೆಯಾದ ಹೆಣ್ಣುಮಕ್ಕಳು, ಮದುವೆಯಾದ ಕುಟುಂಬಕ್ಕೆ ಸೇರುತ್ತಾರೆ. ಆ ಕುಟುಂಬದ ಹೆಸರನ್ನೂ ಹೊಂದುತ್ತಾರೆ. ಪರಿಹಾರದ ವಿಚಾರವಾಗಿಯೂ ಚರ್ಚೆ ನಡೆಯುತ್ತಿದ್ದು, ಕಾನೂನು ಪ್ರಕಾರ ಯಾರಿಗೆ ಸಿಗಬೇಕೋ ಅವರಿಗೆ ಸಿಗಲಿದೆ. ಆನಂದತೀರ್ಥ ಅವರ ಸಹೋದರಿ ಸುಶೀಲಾ ಅವರಿಗೂ ವಯಸ್ಸಾಗಿದೆ.

ಆನಂದತೀರ್ಥ ಅವರ ಪರಿಹಾರ ಹಣವು ಸುಶೀಲಾ ಅವರಿಗೆ ಸಿಗಲಿ’ ಎಂದು ಹೇಳಿದರು.

‘ನಾರಾಯಣ ಆಚಾರ್‌ ಅವರ ಬಗ್ಗೆ ಕಟ್ಟುಕತೆ ಕಟ್ಟಿ ತೇಜೋವಧೆಗೆ ಪ್ರಯತ್ನಿಸಲಾಯಿತು. ಅವರ ವಿರುದ್ಧದ ಆರೋಪಗಳಲ್ಲಿ ಹುರುಳಿಲ್ಲ’ ಎಂದ ಜಯಪ್ರಕಾಶ್‍ ರಾವ್‌, ‘ಆಚಾರ್ ಅವರು ಕೇವಲ ಅರ್ಚಕರಾಗಿರದೇ ಪ್ರಗತಿಪರ ಕೃಷಿಕರಾಗಿ, ಜೇನು ಸೊಸೈಟಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ಅವರು ಮಣ್ಣಿನಡಿ ಸಿಲುಕಿ ಭೂಸಮಾಧಿ ಆಗಿದ್ದರೆ, ಅವರ ಆಸ್ತಿಯ ಬಗ್ಗೆ ಕಟ್ಟುಕತೆ ಕಟ್ಟಲಾಯಿತು’ ಎಂದು ಪತ್ರಿಕಾಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.

ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ