Breaking News

ಶಂಕರಗೌಡ ಪಾಟೀಲ ಅಧಿಕಾರ ಸ್ವೀಕಾರ

Spread the love

ಬೆಳಗಾವಿ: ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿಯಾಗಿ ನೇಮಕಗೊಂಡಿರುವ ಬೆಳಗಾವಿಯ ಶಂಕರಗೌಡ ಪಾಟೀಲ ಅವರು ಮಂಗಳವಾರ ನವದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಕರ್ನಾಟಕ ಭವನದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕೇಂದ್ರ ಸರ್ಕಾರದ ಹಾಗೂ ದೆಹಲಿ‌ ಕಚೇರಿಗಳಲ್ಲಿ ಕರ್ನಾಟಕ ಸರ್ಕಾರದ ಬಾಕಿ ಇರುವ ಯೋಜನೆಗಳಿಗೆ ಅನುಮೋದನೆ ದೊರಕಿಸುವ ನಿಟ್ಟಿನಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಬಾಕಿ ಇರುವ ಪ್ರಸ್ತಾವಗಳ ಸಮಗ್ರ ಮಾಹಿತಿ ಒದಗಿಸಬೇಕು ಎಂದು ಸೂಚಿಸಿದರು.

ಕರ್ನಾಟಕ ಭವನದ ವಿಶೇಷ ನಿವಾಸಿ ಆಯುಕ್ತ ವಿಜಯ ರಂಜನ್‌ಸಿಂಗ್, ಹೆಚ್ಚುವರಿ ನಿವಾಸಿ ಆಯುಕ್ತ ಗುರುನೀತ್ ತೇಜ್, ಉಪ ನಿವಾಸಿ ಆಯುಕ್ತ ಎಚ್. ಪ್ರಸನ್ನ ಮತ್ತು ಅಧಿಕಾರಿಗಳು ಇದ್ದರು.

ಬಳಿಕ ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದರು.

 


Spread the love

About Laxminews 24x7

Check Also

ಕ್ಯಾಬಿನೆಟ್‌ನಲ್ಲಿ ಕನಿಷ್ಠ ಐದು ಪರಿಷತ್ ಸದಸ್ಯರಿಗೆ ಅವಕಾಶ ನೀಡಿ – ರಣದೀಪ್ ಸುರ್ಜೆವಾಲಾಗೆ MLCಗಳಿಂದ ಮನವಿ

Spread the loveನವದೆಹಲಿ: ಪಂಚರಾಜ್ಯಗಳ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿವೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ