Breaking News

ಒಂದೂವರೆ ಲಕ್ಷ ರುಪಾಯಿ ನಗದು ಹಣ ಮತ್ತು ಮೊಬೈಲ್ ಫೋನ್ ನ್ನ ಮೃತ ಶಿಕ್ಷಕನ ಪತ್ನಿಗೆ ಮರಳಿಸಿ ಪಿಎಸ್‍ಐ ಮಾನವೀಯತೆ ಮೆರೆದಿದ್ದಾರೆ.

Spread the love

ಹಾವೇರಿ: ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಶಿಕ್ಷಕನ ಬಳಿ ಇದ್ದ ಒಂದೂವರೆ ಲಕ್ಷ ರುಪಾಯಿ ನಗದು ಹಣ ಮತ್ತು ಮೊಬೈಲ್ ಫೋನ್ ನ್ನ ಮೃತ ಶಿಕ್ಷಕನ ಪತ್ನಿಗೆ ಮರಳಿಸಿ ಪಿಎಸ್‍ಐ ಮಾನವೀಯತೆ ಮೆರೆದಿದ್ದಾರೆ. ಈ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಶುಕ್ರವಾರ ರಾತ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ನಿಸ್ಸೀಮ ಆಲದಕಟ್ಟಿ ಗ್ರಾಮದ ಬಳಿ ನಡೆದ ಬೈಕ್ ಅಪಘಾತದಲ್ಲಿ ಶಿಕ್ಷಕ 45 ವರ್ಷದ ಪರಶುರಾಮ ಕೋಲೂರ ಮೃತಪಟ್ಟಿದ್ರು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದ ಪಿಎಸ್‍ಐ ಆಂಜನೇಯ, ಮೃತನ ಬಳಿ ಇದ್ದ ಒಂದೂವರೆ ಲಕ್ಷ ರುಪಾಯಿ ನಗದು ಹಣ ಮತ್ತು ಒಂದು ಮೊಬೈಲ್ ಫೋನ್ ನ್ನ ಮೃತನ ಪತ್ನಿ ದೀಪಾಳಿಗೆ ಒಪ್ಪಿಸಿದ್ದಾರೆ.

ಹಣ ಮತ್ತು ಮೊಬೈಲ್ ಮರಳಿಸಿ ಮಾನವೀಯತೆ ಮೆರೆದ ಪಿಎಸ್‍ಐ ಆಂಜನೇಯ ಕಾರ್ಯಕ್ಕೆ ಮೃತನ ಪತ್ನಿ ಹಾಗೂ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಯತ್ನಾಳ್ ಮತ ಅಸಿಂಧು ಆಕ್ಷೇಪ ತಿರಸ್ಕಾರ – ಮತಗಟ್ಟೆಯಲ್ಲಿ ಉಲ್ಲಂಘನೆ ಆಗಿಲ್ಲ ಎಂದ ಚುನಾವಣಾಧಿಕಾರಿ

Spread the loveಬೆಂಗಳೂರು: ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಅವರ ಮತವನ್ನು ಅಸಿಂಧುಗೊಳಿಸಬೇಕೆಂಬ ಕಾಂಗ್ರೆಸ್‌ ಆಕ್ಷೇಪವನ್ನ ಚುನಾವಣಾಧಿಕಾರಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ