Breaking News

ಚಿತ್ರರಂಗವಿರಲೀ, ಅಥವಾ ಬೇರಾವ ರಂಗದವರೇ  ಇರಲೀ ಜಾಲದಲ್ಲಿರುವ ಶಿಕ್ಷೆಯಾಗಲಿದೆ: ಬಿ.ಸಿ.ಪಾಟೀಲ್ 

Spread the love

ಕೋಲಾರ:  ಮಾದಕ ಸೇವನೆ ಯಾರೇ ಮಾಡಿದರೂ ತಪ್ಪೇ. ಚಿತ್ರರಂಗವಿರಲೀ, ಅಥವಾ ಬೇರಾವ ರಂಗದವರೇ  ಇರಲೀ ಜಾಲದಲ್ಲಿರುವ ಶಿಕ್ಷೆಯಾಗಲಿದೆ  ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಚಿತ್ರನಟಿ ರಾಗಿಣಿಯಾಗಲೀ ಯಾರೇ ಆಗಲೀ ಉಪ್ಪು ತಿಂದವರು ನೀರು ಕುಡಿಯಲೇಬೇಕು. ಯಾರೂ ಕೂಡ ಮಾದಕ ದ್ರವ್ಯಗಳಿಗೆ ವ್ಯಸನಿಗಳಾಗಬಾರದು. ನಮ್ಮ ಕಾಲಕ್ಕೂ ನಮ್ಮ ಮಕ್ಕಳ ಕಾಲಕ್ಕೂ ಜನರೇಷನ್ ಬದಲಾಗುತ್ತಿದೆ. ಚಿತ್ರರಂಗವೂ ಬದಲಾಗಿದೆ ಅಂದಮಾತ್ರಕ್ಕೆ ದುಶ್ಚಟಕ್ಕೆ ಬಲಿಯಾಗುವುದಾಗಲೀ ವ್ಯಸನಿಗಳಾಗುವುದಾಗಲೀ ಮಾಡಬಾರದು. ತಪ್ಪು ಯಾರೂ ಮಾಡಿದ್ದಾರೆ ಎನ್ನುವುದು ಜನರಿಗೆ ತನಿಖೆಯಿಂದ ಗೊತ್ತಾಗಲಿದೆ. ತನಿಖೆಗೂ ಮುನ್ನ ಸುಕಾಸುಮ್ಮನೆ ಹೇಳಿಕೆ ನೀಡುವುದು ಸರಿಯಲ್ಲ ಎಂದರು.


Spread the love

About Laxminews 24x7

Check Also

ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ

Spread the love ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ ಗೋಕಾಕ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ