Breaking News

ಬೆಳಗಾವಿ: ಸಕ್ಕರೆ ಕಾರ್ಖಾನೆ ಎದುರು ರೈತರ ಧರಣಿ

Spread the love

ಎಂ.ಕೆ. ಹುಬ್ಬಳ್ಳಿ (ಬೆಳಗಾವಿ ಜಿಲ್ಲೆ): ಕಬ್ಬಿನ ಬಾಕಿ ಬಿಲ್ ಹಾಗೂ ಕಾರ್ಮಿಕರ ವೇತನ ಪಾವತಿಗೆ ಆಗ್ರಹಿಸಿ ಇಲ್ಲಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಎದುರು ರೈತರು ಸೋಮವಾರ ಧರಣಿ ಆರಂಭಿಸಿದ್ದಾರೆ.

‘2017-18ನೇ ಸಾಲಿನ ಕಬ್ಬಿನ ಬಾಕಿ ಬಿಲ್ ₹ 7.8 ಕೋಟಿ, 2018-19 ಮತ್ತು 2019-20ನೇ ಸಾಲಿನ ಕಬ್ಬು ಕಟಾವು ಮತ್ತು ಸಾಗಾಣಿಕೆಯ ಬಾಕಿ ₹ 1.2 ಕೋಟಿ ಹಾಗೂ 2019-20ನೇ ಸಾಲಿನಲ್ಲಿ ಜನವರಿ ನಂತರ ಕಬ್ಬು ಪೂರೈಸಿದ ರೈತರ ₹ 13.5 ಕೋಟಿಯನ್ನು ಪಾವತಿಸಬೇಕಿದೆ. ಕಾರ್ಮಿಕರ 6 ತಿಂಗಳ ವೇತನ ಬಾಕಿ ಉಳಿಸಿಕೊಂಡಿದೆ’ ಎಂದು ರೈತ ಸಂಘದ ರಾಜ್ಯ ಸಂಚಾಲಕಿ ಜಯಶ್ರೀ ಗುರನ್ನವರ ತಿಳಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ರಾಘವೇಂದ್ರ ನಾಯ್ಕ, ‘ರೈತರ ಬಾಕಿ ಹಣ ಪಾವತಿಸಬೇಕೆಂದು ಹಲವು ಬಾರಿ ಕಾರ್ಖಾನೆಗೆ ಹಾಗೂ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದೇವೆ.

ಪ್ರಯೋಜನ ಆಗದಿರುವುದರಿಂದಾಗಿ ಹೋರಾಟಕ್ಕೆ ಸಿದ್ಧವಾಗಿದ್ದೇವೆ. ಬಾಕಿ ಕೊಡುವವರೆಗೂ ಧರಣಿ ನಡೆಸಲಾಗುವುದು’ ಎಂದರು.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ