Breaking News

ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಮಾರ್ಗ ಯೋಜನೆಗೆ ಅನುಮೋದನೆ: ಸುರೇಶ್ ಅಂಗಡಿ

Spread the love

ಬೆಳಗಾವಿ,  : ಉತ್ತರ ಕರ್ನಾಟಕ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ಕಿತ್ತೂರು-ಧಾರವಾಡ ನಡುವೆ ನೇರ ರೈಲು ಮಾರ್ಗ ಯೋಜನೆಗೆ ಅನುಮೊದನೆ ದೊರೆತಿದ್ದು, ಈ ಯೋಜನೆಗೆ 927.40 ಕೋಟಿ ವೆಚ್ಚವಾಗಲಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ.

ಸೋಮವಾರ ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಯೋಜನೆ ಅನುಷ್ಠಾನಗೊಂಡಲ್ಲಿ ಪ್ರಮುಖ ನಗರಗಳಾದ ಬೆಳಗಾವಿ, ಧಾರವಾಡ ಹಾಗೂ ಹುಬ್ಬಳ್ಳಿಗೆ ಕಡಿಮೆ ಸಮಯದಲ್ಲಿ ಸಂಪರ್ಕ ಸಾಧ್ಯವಾಗಲಿದೆ. ಜತೆಗೆ ಮುಂದಿನ ವರ್ಷಗಳಲ್ಲಿ ಅಭಿವೃದ್ಧಿಗೊಳ್ಳಲಿರುವ ಬೆಳಗಾವಿ-ಕಿತ್ತೂರು-ಧಾರವಾಡ ಕೈಗಾರಿಕಾ ಕಾರಿಡಾರ್ ಬೆಳವಣಿಗೆಗೂ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಈ ಮೊದಲು ರೈಲು ಮಾರ್ಗ ಯೋಜನೆಗೆ ಅನುಮೋದನೆ ದೊರೆತಿರಲಿಲ್ಲ. ಹೀಗಾಗಿ, ಹೊಸದಾಗಿ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು.

ಕೇವಲ 2 ವರ್ಷಗಳ ಅವಧಿಯಲ್ಲಿ ಸಮೀಕ್ಷೆ ಪೂರ್ಣಗೊಂಡಿರುವುದು ದಾಖಲೆಯಾಗಿದೆ. ಈ ಹೊಸ ಮಾರ್ಗಕ್ಕೆ ಉಚಿತವಾಗಿ ಭೂಮಿ ಮತ್ತು ಶೇ.50ರಷ್ಟು ನಿರ್ಮಾಣ ವೆಚ್ಚ ನೀಡಲು ಬದ್ಧವಾಗಿರುವುದಾಗಿ ರಾಜ್ಯ ಸರಕಾರ ತಿಳಿಸಿದೆ ಎಂದರು.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ

Spread the love ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚಿಕ್ಕೋಡಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ