Breaking News

ಹೊಳೆನರಸೀಪುರದ ಒಂಟಿ ಮನೆಯಲ್ಲಿ ಹುಕ್ಕಾಬಾರ್ – ಏಳು ಮಂದಿ ಬಂಧನ

Spread the love

ಹಾಸನ: ಒಂಟಿ ಮನೆಯೊಂದರಲ್ಲಿ ನಡೆಯುತ್ತಿದ್ದ ಹುಕ್ಕಾಬಾರ್ ಪಾರ್ಟಿ ಮೇಲೆ ದಾಳಿ ನಡೆಸಿದ ಹೊಳೆನರಸೀಪುರ ಪೊಲೀಸರು, ಏಳು ಮಂದಿ ಯುವಕರನ್ನು ಬಂಧಿಸಿದ್ದಾರೆ. ಜೊತೆಗೆ ಗಾಂಜಾ ಹಾಗೂ ಹುಕ್ಕಾ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಅಡಿಕೆರೆ ಗ್ರಾಮದಲ್ಲಿ, ಚನ್ನರಾಯಪಟ್ಟಣ ತಾಲೂಕು ಮೂಲದ ಎಚ್.ವಿ.ಸುಹಾಸ್ ನೇತೃತ್ವದಲ್ಲಿ ಹುಕ್ಕಾಬಾರ್ ನಡೆಯುತ್ತಿತ್ತು. ಸುಹಾಸ್ ಸೇರಿ ಆರು ಜನರ ಬಂಧನವಾಗಿದೆ. ಒಂಟಿ ಮನೆಯನ್ನು ಬಾಡಿಗೆ ಪಡೆದು ಅಲ್ಲಿ ಹುಕ್ಕಾಬಾರ್ ನಡೆಸುತ್ತಿದ್ದ ಸುಹಾಸ್ ತನ್ನದೇ ಗ್ರಾಹಕರನ್ನು ಹೊಂದಿದ್ದ ಎನ್ನಲಾಗಿದೆ.

ಗ್ರಾಮೀಣ ಪ್ರದೇಶವಾದ ಕಾರಣ ಯಾರ ಗಮನಕ್ಕೂ ಬರುವುದಿಲ್ಲ ಎಂದು ಭಾವಿಸಿ ಪಾರ್ಟಿ ಮಾಡಿದ್ದಾರೆ. ಆದರೆ ಖಚಿತ ಮಾಹಿತಿ ಆಧರಿಸಿ ರಾತ್ರಿ ಮನೆ ಮೇಲೆ ದಾಳಿ ಮಾಡಿದ ಹೊಳೆನರಸೀಪುರ ಪೊಲೀಸರು ಗಾಂಜಾ ಸೇವಿಸುತ್ತಿದ್ದ ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ಪಿ ಲಕ್ಷ್ಮೇಗೌಡ ನೇತೃತ್ವದಲ್ಲಿ ಸಿಪಿಐ ಆರ್.ಪಿ. ಅಶೋಕ್, ಪಿಎಸ್‍ಐ ಮೋಹನ್ ಕೃಷ್ಣ ತಂಡ ಕಾರ್ಯಾಚರಣೆ ನಡೆಸಿ ಹುಕ್ಕಾಬಾರ್ ಬಂದ್ ಮಾಡಿಸಿದೆ.

 


Spread the love

About Laxminews 24x7

Check Also

ತೀಯ ಪಿಯುಸಿ ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ 2ನೇ ರ್ಯಾಂಕ್

Spread the loveಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ನಿಡಸೋಸಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಂಕಿತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ