Breaking News

ನೀರು ಪೂರೈಕೆ ಯೋಜನೆ ಪ್ರಗತಿ ಪರಿಶೀಲನೆ

Spread the love

ಬೆಳಗಾವಿ: ತಾಲ್ಲೂಕಿನ ತುಮ್ಮರಗುದ್ದಿ, ಕುಂದರಗಿ, ಬಸವಸನಕೊಳ್ಳ ಹಾಗೂ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯಕ್ಕೆ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನಿರ್ದೇಶಕಿ ದೀಪಾ ಕುಡಚಿ ಮಂಗಳವಾರ ಭೇಟಿ ನೀಡಿದರು.

ಮಂಡಳಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಕುಡಿಯುವ ನೀರು ಪೂರೈಕೆ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

‘ಸೆ. 15ರಂದು ಬೆಂಗಳೂರಿನಲ್ಲಿ ಮಂಡಳಿ ಸಭೆ ನಡೆಯಲಿದೆ. ಮಂಡಳಿತ ಅಧ್ಯಕ್ಷರೊಂದಿಗೆ ಚರ್ಚಿಸಿ, ಅಭಿವೃದ್ಧಿ ಕೆಲಸಕ್ಕೆ ವೇಗ ನೀಡಲಾಗುವುದು. ಎಲ್ಲ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯ ಕ್ರಮ ವಹಿಸಲಾಗುವುದು’ ಎಂದು ತಿಳಿಸಿದರು.

ಮಂಡಳಿಯ ಎಇ ವಿ.ಎಲ್. ಚಂದ್ರಪ್ಪ, ಎಇಇ ಎಸ್.ಬಿ. ಹಾಲನ್ನವರ, ಸತೀಶ ಶಹಾಪುರಕರ ಇದ್ದರು.


Spread the love

About Laxminews 24x7

Check Also

ಗ್ಯಾರಂಟಿಗಳ ಬಜೆಟ್ ಇಡೀ ರಾಜ್ಯದ ಆರ್ಥಿಕತೆ ಕುಸಿತಕ್ಕೆ ಕಾರಣವಾಗಲಿದೆ

Spread the loveಬೆಳಗಾವಿ: ಶಿಸ್ತುಬದ್ಧ ತೆರಿಗೆ ಪಾವತಿ ಸೇರಿ ದೇಶದ ಕಾನೂನು ಪಾಲನೆಯಲ್ಲಿ ಯೋಜನಾ ಬದ್ಧ ಜೀವನ ವ್ಯವಸ್ಥೆ ಹೊಂದಿರುವ ಕರ್ನಾಟಕಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ