Home / ಜಿಲ್ಲೆ / ಬೆಂಗಳೂರು / ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಮಳೆ……………

ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಮಳೆ……………

Spread the love

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಮಳೆಯಾಗಿದ್ದು, ರಾತ್ರಿ ಪೂರ್ತಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಜೊತೆಗೆ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ನಗರ ಬಹುತೇಕ ಭಾಗಗಳಲ್ಲಿ ಮಳೆಯಾಗಿದ್ದು, ಸಿಲಿಕಾನ್ ಸಿಟಿಯ ಹೆಚ್‍ಎಸ್‍ಆರ್ ಲೇಔಟ್ ಮತ್ತು ಹೊರಮಾವು ಬಹುತೇಕ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಶಾಂತಿನಗರ, ಜಯನಗರ, ಬನಶಂಕರಿ, ಮೆಜೆಸ್ಟಿಕ್, ಮಲ್ಲೇಶ್ವರಂ, ಶಿವಾಜಿನಗರ, ಹೆಬ್ಬಾಳ, ರಾಜಾಜಿನಗರ, ಕೋರಮಂಗಲ, ಕೆಆರ್ ಪುರಂ ಮತ್ತು ಹೆಗ್ಡೆ ನಗರ ಸೇರಿದಂತೆ ಹಲವೆಡೆ ವರಣ ಅಬ್ಬರಿಸಿದ್ದಾನೆ.

ಶಿವಾನಂದ ಸರ್ಕಲ್ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ನೀರು ನಿಂತು, ಅದರಲ್ಲಿ ಸಿಲುಕಿದ ಐಷಾರಾಮಿ ಕಾರೊಂದನ್ನು ಹೊರತೆಗೆಯಲಾಗದೆ ಚಾಲಕ ಪರದಾಡಿದ್ದಾನೆ. ಸಹಕಾರ ನಗರದ ರಸ್ತೆಯೊಂದು ಸಂಪೂರ್ಣ ನೀರಿನಿಂದ ತುಂಬಿಹೋಗಿದೆ. ಹೊರಮಾವವಿನಲ್ಲಿ ಮನೆಗಳಿಗೆ ನೀರು ನುಗ್ಗುವ ಮಟ್ಟಕ್ಕೆ ನೀರು ರಸ್ತೆಯಲ್ಲಿ ನಿಂತಿದೆ. ಸಂಜಯ ನಗರದಲ್ಲಿ ಮರವೊಂದು ಉರುಳಿ ಬಿದ್ದಿದೆ. ಹೊರಮಾವಿನ ಕೆಲ ಏರಿಯಾಗಳು ಸಂಪೂರ್ಣ ಜಲಾವೃತವಾಗಿದ್ದು, ಜನ ಮನೆಯಿಂದ ಹೊರಬರುವುದಕ್ಕೂ ಕಷ್ಟವಾಗಿದೆ.

ಬೆಂಗಳೂರಿನ ಬಹುತೇಕ ಕಡೆ ಮಳೆಯಾಗಿದ್ದು, ಇನ್ನೂ ಕೆಲವು ಕಡೆ ಅಲ್ಪ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮನೆಗೆ ನೀರು ನುಗ್ಗಿ ಬಿಬಿಎಂಪಿಗೆ ಕರೆ ಮಾಡಿದರೂ ಯಾವುದೇ ಅಧಿಕಾರಿ ಸ್ಥಳಕ್ಕೆ ಬಂದಿಲ್ಲ. ಪ್ರತಿ ಬಾರಿ ಮಳೆ ಬಂದಾಗಲೂ ಸಹ ಇದೇ ರೀತಿ ಮನೆಗಳಿಗೆ ನೀರು ನುಗ್ಗುತ್ತದೆ. ಆದರೆ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಬರಬೇಕು ಎಂದು ಹೊರಮಾವು ಮತ್ತು ಸಾಯಿ ಬಡಾವಣೆಯ ಜನರು ಒತ್ತಾಯ ಮಾಡಿದ್ದಾರೆ.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ