Breaking News

ದಾಯಾದಿಗಳ ಜಗಳ ಕೊಲೆಯಲ್ಲಿ ಅಂತ್ಯ

Spread the love

ಬೆಂಗಳೂರು,  ಕ್ಷುಲ್ಲಕ ಕಾರಣಕ್ಕೆ ಅಣ್ಣ ತಮ್ಮಂದಿರ ನಡುವೆ ಹೊಡೆದಾಟವಾಗಿದ್ದು, ತಮ್ಮ ಕೊಲೆಯಾಗಿರುವ ಘಟನೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ತಮ್ಮ ಸಲೀಂಪಾಷಾ (28)ಕೊಲೆಯಾಗಿದ್ದು, ಅಣ್ಣ ಅಪ್ಸರ್‍ಪಾಷಾ(32)ನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣ-ತಮ್ಮಂದಿರಿಬ್ಬರು ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು.

ಇಂದು ಬೆಳಗ್ಗೆ 8ಗಂಟೆಗೆ ಅಣ್ಣ-ತಮ್ಮಂದಿರ ನಡುವೆ ಜಗಳವಾಗಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಅಪ್ಸರ್‍ಪಾಷಾ ದೊಣ್ಣೆಯಿಂದ ಹಲ್ಲೆ ನಡೆಸಿದ್ದು, ಸಲೀಂಪಾಷಾನ ಮೂಗು, ಬಾಯಿಯಲ್ಲಿ ರಕ್ತ ಬಂದಿದೆ.

ಕೂಡಲೇ ಗಾಯಾಳುವನ್ನು ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಸಂಜಯನಗರ ಪೊಲೀಸರು ಕೇಸು ದಾಖಲಿಸಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ದರ್ಶನ್‌ಗೆ ಜೈಲಿನಲ್ಲಿ ಕನಿಷ್ಠ ಸೌಲಭ್ಯ ನಿರಾಕರಣೆ ಆರೋಪ: ಕಾರಾಗೃಹಕ್ಕೆ ಭೇಟಿ ನೀಡುವಂತೆ ಕಾರ್ಯದರ್ಶಿಗೆ ಕೋರ್ಟ್ ಸೂಚನೆ

Spread the love ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಅವರು ಜೈಲಿನಲ್ಲಿ ತಮಗೆ ಕನಿಷ್ಠ ಸೌಲಭ್ಯ ನೀಡುತ್ತಿಲ್ಲವೆಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ