Breaking News

ಪಬ್‍ಜಿ ಗೇಮ್ ಬ್ಯಾನ್,ಇಂಟರ್ನೆಟ್ ಹಾಕಿಸದೇ ಇರುವ ಹಿನ್ನೆಲೆಯಲ್ಲಿ ಆತ್ಮಹತ್ಯೆ

Spread the love

ಹುಬ್ಬಳ್ಳಿ: ಪಬ್‍ಜಿ ಗೇಮ್ ಬ್ಯಾನ್ ಆಗಿದ್ದರು ಕೂಡ ಆಟ ಬಾಲಕನೊಬ್ಬನನ್ನು ಬಲಿ ತೆಗೆದುಕೊಂಡಿದೆ. ಪಬ್‍ಜಿ ಆಟವಾಡಲು ಇಂಟರ್ನೆಟ್ ಹಾಕಿಸದೇ ಇರುವ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಹಾವೇರಿ ಜಿಲ್ಲೆಯ ಸಂಗೂರ ಗ್ರಾಮದ ತೇಜಸ್ ಸಿಡ್ಲಾಪುರ (17) ಮೃತಪಟ್ಟ ಬಾಲಕ. ಆಗಸ್ಟ್ 31 ರಂದು ವಿಷ ಸೇವಿಸಿದ್ದ ಬಾಲಕ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಮೊಬೈಲ್‍ನಲ್ಲಿ ಇಂಟರ್ನೆಟ್ ಖಾಲಿ ಆಗಿತ್ತು. ಖಾಲಿ ಆಗಿದ್ದ ಇಂಟರ್ನೆಟ್ ಹಾಕಿಸದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದು, ಈಗ ತಾನೆ ಎಸ್‍ಎಸ್‍ಎಲ್‍ಸಿ ಮುಗಿಸಿದ್ದ ಬಾಲಕ ಪಬ್ ಜೀ ಆಟಕ್ಕೆ ಬಲಿಯಾಗಿದ್ದಾನೆ.

ಈ ಕುರಿತು ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ