Breaking News

ಕಿತ್ತೂರು ಚೆನ್ನಮ್ಮನ ಮೂರ್ತಿಯ ಮುಖಕ್ಕೆ ಜೇನು ಹುಳುಗಳು……………

Spread the love

ಹುಬ್ಬಳ್ಳಿ: ಸೂಕ್ತ ನಿರ್ವಹಣೆ ಹಾಗೂ ಸ್ವಚ್ಛತೆ ಕಾಪಾಡದ ಹಿನ್ನೆಲೆ ಹುಬ್ಬಳಿಯ ಐಕಾನ್, ಸುಪ್ರಸಿದ್ಧ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಪುತ್ಥಳಿಗೆ ಜೇನು ಹುಳುಗಳು ಮುತ್ತಿಕೊಂಡಿವೆ. ಚೆನ್ನಮ್ಮನ ಮುಖ ಕಾಣದಂತೆ ದಟ್ಟವಾಗಿ ಹುಳುಗಳು ಮುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಗರ ವಾಸಿಗಳು ಕಿಡಿಕಾರಿದ್ದಾರೆ.

ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ಹುಬ್ಬಳ್ಳಿಯ ಜನನಿಬೀಡ ಪ್ರದೇಶವಾಗಿದ್ದು, ಎಲ್ಲರಿಗೂ ತಿಳಿದ ವಿಚಾರ. ಹುಬ್ಬಳ್ಳಿಯನ್ನು ಇದೇ ವೃತ್ತದಿಂದಲೂ ಹಲವರು ಗುರುತಿಸುತ್ತಾರೆ. ಹುಬ್ಬಳ್ಳಿಯ ಐಕಾನ್ ಎಂದೇ ಈ ವೃತ್ತವನ್ನು ಕರೆಯಲಾಗುತ್ತದೆ. ಇಂತಹ ಸುಪ್ರಸಿದ್ಧ ಹಾಗೂ ಜನನಿಬಿಡ ಪ್ರದೇಶದಲ್ಲಿನ ರಾಣಿ ಚೆನ್ನಮ್ಮ ಪುತ್ಥಳಿಯನ್ನು ನಿರ್ವಹಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಹೀಗಾಗಿ ವಿಪರೀತ ಧೂಳು ಆವರಿಸಿದೆ. ಇದೀಗ ಜೇನು ಹುಳುಗಳು ಮುತ್ತಿವೆ.

ಕಿತ್ತೂರು ಚೆನ್ನಮ್ಮನ ಮೂರ್ತಿಯ ಮುಖಕ್ಕೆ ಜೇನು ಹುಳುಗಳು ಮುತ್ತಿಕ್ಕಿಕೊಂಡ ಪರಿಣಾಮ ಚೆನ್ನಮ್ಮನ ಮುಖ ದರ್ಶನವೇ ಕಾಣುತ್ತಿರಲಿಲ್ಲ. ಹಲವರು ಈ ಕುರಿತು ಆಕ್ರೋಶ ವ್ಯಕ್ತಪಡಿಸಿದರೆ, ಇನ್ನೂ ಹಲವರು ಆಶ್ಚರ್ಯವೆಂಬಂತೆ ನೋಡುತ್ತಿದ್ದರು. ಪಾಲಿಕೆ ಅಧಿಕಾರಿಗಳು ಜೇನು ಹುಳುಗಳನ್ನು ತೆರವುಗೊಳಿಸಿ, ಪುತ್ಥಳಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ, ಇನ್ನಾದರೂ ಸುಪ್ರಸಿದ್ಧ ಪುತ್ಥಳಿಯನ್ನು ಸರಿಯಾಗಿ ನಿರ್ವಹಿಸಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ