Breaking News

ಸಾವಿರಾರು ಭಕ್ತರ ಸಮ್ಮುಖದಲ್ಲಿವೇಣುಗೋಪಾಲ ಸ್ವಾಮಿಯ ಜಾತ್ರಾ ಮಹೋತ್ಸವ

Spread the love

ಯಾದಗಿರಿ: ಕೊರೊನಾ ಭೀತಿಯ ನಡುವೆ ಜಿಲ್ಲೆಯ ಸುರಪುರದ ಐತಿಹಾಸಿಕ ಪ್ರಸಿದ್ಧ ವೇಣುಗೋಪಾಲ ಸ್ವಾಮಿಯ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ, ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದಿದೆ.

ಜಾತ್ರೆಯಲ್ಲಿ ಪಾಲ್ಗೊಂಡ ಜನ ಮುಖಕ್ಕೆ ಮಾಸ್ಕ್ ಧರಿಸಿದೆ, ಸಾಮಾಜಿಕ ಅಂತರವಿಲ್ಲದೆ ಪಾಲ್ಗೊಂಡಿದ್ದರು. ಪೊಲೀಸರು ಎದುರಿಗೆ ಇದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೊರೊನಾ ನಿಯಮಗಳು ಇದ್ದರೂ ಪೊಲೀಸ್ ಇಲಾಖೆ ಜಾತ್ರೆಗೆ ಹೇಗೆ ಅನುಮತಿ ನೀಡಿದೆ ಎಂಬ ಅನುಮಾನ ಮೂಡಿದೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6 ಸಾವಿರ ಗಡಿ ದಾಟಿದೆ. 40ಕ್ಕೂ ಅಧಿಕ ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಒಂದು ಕಡೆ ಪ್ರವಾಹ ಮತ್ತೊಂದು ಕಡೆ ಕೊರೊನಾ ವಿರುದ್ಧ ಜಿಲ್ಲಾಡಳಿತ ಹಗಲು-ರಾತ್ರಿ ಹೋರಾಟ ನಡೆಸಿದೆ. ಕೊರೊನಾ ಅನ್‍ಲಾಕ್ ನಿಯಮಗಳ ಪ್ರಕಾರ ಯಾವುದೇ ಜಾತ್ರೆ, ಸಭೆ ಸಮಾರಂಭಕ್ಕೆ ಅನುಮತಿ ಸಿಕ್ಕಿಲ್ಲ. ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ನೀಡಿದೆಯಾದರೂ 50ಕ್ಕೂ ಅಧಿಕ ಜನರಿಗೆ ಅವಕಾಶವಿಲ್ಲ. ಆದರೆ ಯಾದಗಿರಿಯಲ್ಲಿ ಸರ್ಕಾರದ ಆದೇಶಕ್ಕೆ ಕಿಮ್ಮತ್ತು ಇಲ್ಲದಂತಾಗಿದೆ. ನಿಯಮಗಳನ್ನು ಗಾಳಿಗೆ ತೂರಿ ಸಾವಿರಾರು ಜನ ಜಾತ್ರೆ ಮಾಡಿದ್ದಾರೆ.


Spread the love

About Laxminews 24x7

Check Also

ಗಾಂಧಿ ಪಾಕಿಸ್ತಾನದ ಪಿತಾಮಹ, ಓಮರ್ ಅಬ್ದುಲ್ಲಾ, ರಾಹುಲ್ ಗಾಂಧಿ ಒಂದೇ ಪ್ರೊಡಕ್ಷನ್ : ಯತ್ನಾಳ್ ವಿವಾದದ ಹೇಳಿಕೆ ವೈರಲ್!

Spread the loveಯಾದಗಿರಿ : ಮಹಾತ್ಮ ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ. ಪಾಕಿಸ್ತಾನದ ರಾಷ್ಟ್ರಪಿತ ಎಂದು ಶಾಸಕ ಬಸನಗೌಡ ಪಾಟೀಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ