Breaking News

ಮಳೆ ಮುಂದುವರಿದರೆ ಬೆಳೆ ಕೊಳೆಯುವ ಸಾಧ್ಯತೆ ಇದೆ ಎಂದು ರೈತರು ಆತಂಕಗೊಂಡಿದ್ದಾರೆ.

Spread the love

ಬೆಂಗಳೂರು: ರಾಜ್ಯದೆಲ್ಲೆಡೆ ವರುಣನ ಆರ್ಭಟ ಮುಂದುವರಿದಿದೆ. ಕೆಲವು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಕೆರೆ, ಕಟ್ಟೆಗಳು ತುಂಬಿದ್ದು, ಹಲವೆಡೆ ಅವಾಂತರ ಸೃಷ್ಟಿಸಿದೆ.

ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು ಜನರನ್ನು ಮತ್ತೆ ಆತಂಕಕ್ಕೆ ದೂಡಿದೆ. ಬಾಗಮಂಡಲ ಮತ್ತು ತಲಕಾವೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದರೆ, ಮಡಿಕೇರಿ, ನಾಪೋಕ್ಲು ಸೇರಿದಂತೆ ಹಲವೆಡೆ ಮಳೆ ಜೊತೆಗೆ ಭಾರೀ ಪ್ರಮಾಣದಲ್ಲಿ ಚಳಿಗಾಳಿ ಬೀಸುತ್ತಿದ್ದು ಜನರು ತತ್ತರಿಸಿದ್ದಾರೆ. ತಲಕಾವೇರಿ, ಬಾಗಮಂಡಲ ಸುತ್ತಮುತ್ತಲಿನ ಬೆಟ್ಟ ಪ್ರದೇಶದಲ್ಲೆಲ್ಲಾ ಭಾರೀ ಮಳೆ ಸುರಿಯುತ್ತಿದ್ದು ಕಾವೇರಿ ನದಿಯ ನೀರಿನ ಮಟ್ಟ ಜಾಸ್ತಿಯಾಗಿದೆ. ಒಂದು ವೇಳೆ ಮಳೆ ತೀವ್ರಗೊಂಡಲ್ಲಿ ಜಿಲ್ಲೆಯಲ್ಲಿ ಮತ್ತೆ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ.

ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಉಡುಪಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅರಬ್ಬೀ ಸಮುದ್ರದ ತೀರದ ತಾಲೂಕುಗಳಲ್ಲಿ ಗಾಳಿ ಸಹಿತ ಮಳೆ ಬೀಳುತ್ತಿದೆ. ಸೋಮವಾರ ಯಲ್ಲೋ ಅಲರ್ಟ್ ಇದ್ದು, ಸುಮಾರು 60 ರಿಂದ 110 ಮಿಲಿಮೀಟರ್ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಮೀನುಗಾರಿಕೆ ನಡೆಸಲಾಗುತ್ತಿದೆ. ಮಳೆ ಮುಂದುವರಿದರೆ ಬೆಳೆ ಕೊಳೆಯುವ ಸಾಧ್ಯತೆ ಇದೆ ಎಂದು ರೈತರು ಆತಂಕಗೊಂಡಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ