Breaking News

ದುಷ್ಕರ್ಮಿಗಳು 2 ಎಕರೆ ಟೊಮೆಟೊ ತೋಟಕ್ಕೆ ಕಳೆ ನಾಶಕ ಸಿಂಪಡಣೆ ಮಾಡಿ ವಿಕೃತಿ ಮೆರೆದಿದ್ದಾರೆ

Spread the love

ಕೋಲಾರ: ಹಳೆ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು 2 ಎಕರೆ ಟೊಮೆಟೊ ತೋಟಕ್ಕೆ ಕಳೆ ನಾಶಕ ಸಿಂಪಡಣೆ ಮಾಡಿ ವಿಕೃತಿ ಮೆರೆದಿದ್ದಾರೆ. ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಫಸಲಿಗೆ ಬಂದಿದ್ದ ಟೊಮೆಟೊ ಬೆಳೆ ನಾಶವಾಗಿದೆ.

ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎಳೆಸಂದ್ರ ಗ್ರಾಮದ ರೈತ ಅರ್ಜುನಪ್ಪ ಎಂಬವರ ಟೊಮೆಟೊ ತೋಟಕ್ಕೆ ಕಿಡಿಗೇಡಿಗಳು ಕಳೆದ ರಾತ್ರಿ ಕಳೆ ನಾಶಕ ಸಿಂಪಡಣೆ ಮಾಡಿದ್ದಾರೆ. ಪರಿಣಾಮ 2 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಸುಮಾರು 10 ಸಾವಿರ ಟೊಮೆಟೊ ಸಸಿಗಳು ಫಸಲಿನ ಸಮೇತ ಒಣಗಲಾರಂಭಿಸಿವೆ.

ಟೊಮೆಟೊ ಬೆಲೆ ಗಗನಕ್ಕೇರಿರುವ ಹಿನ್ನೆಲೆ ಉದ್ದೇಶಪೂರ್ವಕವಾಗಿ ಕಿಡಿಗೇಡಿಗಳು ಕಳೆ ನಾಶಕ ಸಿಂಪಡಣೆ ಮಾಡಿದ್ದಾರೆ ಎಂಬುದು ರೈತರ ಆರೋಪ. ಇನ್ನೇನೂ ಕೊಯ್ಲಿಗೆ ಬಂದಿದ್ದ ಲಕ್ಷಾಂತರ ರೂಪಾಯಿಯ ಫಸಲು ನಾಶವಾಗಿದ್ದು, ರೈತ ಕಂಗಾಲಾಗಿದ್ದಾನೆ. ಈಗಾಗಲೇ 15 ಕೆ.ಜಿ ಟೊಮೆಟೊ ಬಾಕ್ಸ್ 700 ರಿಂದ 800 ರೂಪಾಯಿಗೆ ತಲುಪಿದ್ದು, ಲಕ್ಷಾಂತರ ರೂಪಾಯಿಯ ನಿರೀಕ್ಷೆಯಲ್ಲಿದ್ದ ರೈತನಿಗೆ ಆಘಾತವಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ