Breaking News

ವೈದ್ಯರ ಜೊತೆಗಿನ ಸಂಧಾನ ಸಭೆ ಯಶಸ್ವಿಯಾಗಿದೆ: ಸುಧಾಕರ್

Spread the love

ಚಿಕ್ಕಬಳ್ಳಾಪುರ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸರ್ಕಾರಕ್ಕೆ ಯಾವುದೇ ತರನಾದ ರಿಪೋರ್ಟ್ ನೀಡದೆ ವೈದ್ಯರು ಸರ್ಕಾರದ ವಿರುದ್ಧ ಅಸಹಕಾರ ಚಳವಳಿ ನಡೆಸುವ ವಿಚಾರಕ್ಕೆ ಚಿಕ್ಕಬಳ್ಳಾಪುರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.

ಪ್ರತಿಭಟನೆ ವಿಚಾರದ ಸಂಬಂಧ ನಿನ್ನೆ ಹಾಗೂ ಮೊನ್ನೆ ವೈದ್ಯರ ಜೊತೆ ಸಿಎಂ ಸಮಾಲೋಚಿಸಿದ್ದಾರೆ. ಇಂದು ಮಧ್ಯಾಹ್ನ ನಾನು ಸಹ ವೈದ್ಯರ ಜೊತೆ ಮಾತನಾಡಿದ್ದೇನೆ. ಆರ್ಥಿಕ ಇಲಾಖೆ ಜೊತೆ ಮಾತುಕತೆ ನಡೆಸಿ ವೇತನ ಪರಿಷ್ಕರಣೆಗೆ ಸಿದ್ಧವಿದ್ದೇವೆ. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯ ವೇತನ ಪರಿಷ್ಕರಣೆ ಮಾಡಿದ್ದೇವೆ. ನಾನು, ಸಚಿವ ಶ್ರೀರಾಮುಲು ಹಾಗೂ ಡಿಸಿಎಂ ಅಶ್ವತ್ಥ್ ನಾರಾಯಣ್ ಸಭೆ ನಡೆಸಿದ್ದು, ವೈದ್ಯರ ಜೊತೆ ಯಶಸ್ವಿ ಮಾತುಕತೆ ಮೂಲಕ ಸಮಸ್ಯೆ ಬಗೆಹರಿದಿದೆ ಎಂದು ಮಾಹಿತಿ ನೀಡಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ