Breaking News

ಸಫಾರಿಗೆ ಹೋಗಿ ಪ್ರಾಣಿಗಳನ್ನು ಮೊಬೈಲ್‍ನಲ್ಲಿ ಸೆರೆ ಹಿಡಿಯುತ್ತಿದ್ದ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್

Spread the love

ಚಾಮರಾಜನಗರ: ಸಫಾರಿಗೆ ಹೋಗಿ ಪ್ರಾಣಿಗಳನ್ನು ಮೊಬೈಲ್‍ನಲ್ಲಿ ಸೆರೆ ಹಿಡಿಯುತ್ತಿದ್ದ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್ ನೀಡಿದೆ. ಇನ್ಮುಂದೆ ಸಫಾರಿಗೆ ತೆರಳುವ ಪ್ರವಾಸಿಗರು ಮೊಬೈಲ್ ಬಳಸದಂತೆ ನಿಷೇಧವೇರಿದೆ. ಇದು ವನ್ಯ ಪ್ರಾಣಿಗಳ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ. ವನ್ಯಪ್ರಿಯರು ಅರಣ್ಯ ಇಲಾಖೆ ನಿರ್ಧಾರಕ್ಕೆ ತಲೆ ಬಾಗಿದ್ರೆ,ಪ್ರವಾಸಿಗರು ವಿರೋಧ ವ್ಯಕ್ತಪಡಿಸ್ತಿದ್ದಾರೆ.

ಹೌದು. ಸಫಾರಿ ಅಂದ್ರೆ ಯಾರಿಗಿಷ್ಟವಿಲ್ಲ ಹೇಳಿ, ಕಾಡಿಗೆ ಹೋದ್ರೆ ಸಾಕು ಒಂದು ರೌಂಡ್ ಸಫಾರಿಗೆ ಹೋಗಿಬರಬೇಕು ಅನ್ಸುತ್ತೆ. ವನ್ಯ ಪ್ರಾಣುಗಳಾದ ಹುಲಿ, ಆನೆ ಸೇರಿದಂತೆ ಇತರ ಪ್ರಾಣಿಗಳ ದರ್ಶನ ಮಾಡಿ ಪ್ರಕೃತಿಯ ಸೌಂದರ್ಯ ಸವಿದು ಬರುವ ಮಜಾವೇ ಬೇರೆ. ಅದರಲ್ಲೂ ಮೊದಲ್ಲೆಲ್ಲಾ ಪ್ರವಾಸಿಗರು ಸಫಾರಿಗೆ ತೆರಳುವ ವೇಳೆ ಮೊಬೈಲ್ ಬಳಕೆ ಮಾಡ್ತಿದ್ರು ಪ್ರಾಣಿ ಪೋಟೋ, ವಿಡಿಯೋ ಎಲ್ಲವನ್ನೂ ಸೆರೆಹಿಡಿದು ತರುತ್ತಿದ್ದರು. ಅದನ್ನು ತಮ್ಮ ನೆನಪಿನಾಳದಲ್ಲಿ ಇಟ್ಟುಕೊಳ್ಳುತ್ತಿದ್ರು. ಆದರೆ ಇದೀಗ ಅದಕ್ಕೆಲ್ಲಾ ಬ್ರೇಕ್ ಬಿದ್ದಿದೆ.

ವನ್ಯ ಪ್ರಾಣಿಗಳ ಹಿತದೃಷ್ಟಿಯಿಂದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಸಫಾರಿಗೆ ಮೊಬೈಲ್ ನಿಷೇಧ ಮಾಡಿ ಅರಣ್ಯಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇನ್ಮುಂದೆ ಯಾರೂ ಕೂಡ ಸಫಾರಿಗೆ ತೆರಳುವ ವೇಳೆ ಮೊಬೈಲ್ ಬಳಸದಂತೆ ಸೂಚನೆ ಕೊಟ್ಟಿದ್ದಾರೆ. ದೇಶದ ಜಿಮ್ ಕಾರ್ಬೆಟ್, ಥಾಡಾ, ಕಡಬ ಸೇರಿದಂತೆ ಬೇರೆಲ್ಲಾ ಕಡೆ ಎನ್ ಟಿಸಿಎ ನಿಯಮದಂತೆ ಮೊಬೈಲ್ ಬಳಕೆಗೆ ನಿಷೇಧವಿದೆ. ಆದ್ದರಿಂದ ನಾವೂ ಕೂಡ ಮೊಬೈಲ್ ಬಳಕೆಗೆ ನಿಷೇಧ ವಿಧಿಸಿದ್ದೇವೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ಬಾಲಚಂದ್ರ ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ