Breaking News

ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ :ಡಿಸಿಎಂ ಲಕ್ಷ್ಮಣ ಸವದಿ

Spread the love

ರಾಯಚೂರು : ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯೋಜನೆ ತಯಾರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಅಂತ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ರಾಯಚೂರಿನ ಪೊಲೀಸ್ ಕವಾಯತ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ಬಳಿಕ ಮಾತನಾಡಿದ ಸಚಿವರು, ವಿಮಾನ ನಿಲ್ದಾಣಕ್ಕೆ ಸಂಪುಟದ ಒಪ್ಪಿಗೆ ಪಡೆಯಲಾಗುವುದು.

ವಿಮಾನ ನಿಲ್ದಾಣ ಬರುವದರಿಂದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದರು. ಈಗಾಗಲೇ ಕೇಂದ್ರ ಸರ್ಕಾರ ಐಐಐಟಿ ನೀಡಿದೆ. ಏಮ್ಸ್ ರಾಯಚೂರು ಜಿಲ್ಲೆಗೆ ಬರಬೇಕೆಂದು ನಾನು ಉಸ್ತುವಾರಿ ಸಚಿವನಾಗಿ ಪ್ರಾಮಾಣಿಕ ಪ್ರಯತ್ನ ಮಾಡಲು ಸಿದ್ಧನಿದ್ದೇನೆ ಎಂದರು.

ನಗರದ ಅಭಿವೃದ್ಧಿಗಾಗಿ 100 ಕೋಟಿ ನೀಡಲಾಗಿದೆ. ಮಳೆಗಾಲದ ನಂತರ ಕಾಮಗಾರಿ ಆರಂಭಿಸಲಾಗುವುದು. ಕೊರೊನಾದಿಂದಾಗಿ ಸ್ವಲ್ಪ ಅಭಿವೃದ್ಧಿ ಕುಂಠಿತವಾಗುತ್ತಿದೆ.

ಭಗವಂತನಲ್ಲಿ ಪ್ರಾರ್ಥಿಸಿ ಕೊರೊನಾ ಬೇಗ ದೂರವಾಗಲಿ ಎಂದು ಆಶಿಸುತ್ತೇನೆ ಅಂತ ಸಚಿವ ಲಕ್ಷ್ಮಣ ಸವದಿ ಹೇಳಿದರು.


Spread the love

About Laxminews 24x7

Check Also

ಉಗಾರದ ಪದ್ಮಾವತಿ ಮಂದಿರ ಸಮುದಾಯ ಭವನ ಹಾಗೂ ಮುಂಭಾಗದಲ್ಲಿ ಆರ್‌ಸಿಸಿ ಕಾಮಗಾರಿಗಾಗಿ 65 ಲಕ್ಷ ರೂಪಾಯ್ ಕಾಮಗಾರಿಗೆ ಶಾಸಕ ರಾಜು ಕಾಗೆ ಪೂಜೆ ನೆರವೇರಿಸಿದರು.

Spread the love ಉಗಾರದ ಪದ್ಮಾವತಿ ಮಂದಿರ ಸಮುದಾಯ ಭವನ ಹಾಗೂ ಮುಂಭಾಗದಲ್ಲಿ ಆರ್‌ಸಿಸಿ ಕಾಮಗಾರಿಗಾಗಿ 65 ಲಕ್ಷ ರೂಪಾಯ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ