Breaking News

ಕೊರೋನಾದಿಂದ ಆರ್ಥಿಕ ಸಂಕಷ್ಟ: ತಾಯಿ, ಮಗ ನೇಣಿಗೆ ಶರಣು

Spread the love

ಬೆಳಗಾವಿ : ಕೊರೋನಾದಿಂದ ಎದುರಾದ ಆರ್ಥಿಕ ಸಂಕಷ್ಟದಿಂದ ಮನನೊಂದು ತಾಯಿ ಹಾಗೂ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ನಡೆದಿದೆ.

ಹಲಗಾ ಗ್ರಾಮದ ಭಾರತಿ ಶೇಖರ ದೇಸಾಯಿ (35) ಹಾಗೂ ಪ್ರಜ್ವಲ್‌ ಶೇಖರ ದೇಸಾಯಿ (14) ಆತ್ಮಹತ್ಯೆಗೆ ಶರಣಾದವರು. ಕಳೆದ ಕೆಲವು ವರ್ಷಗಳಿಂದ ಹಲಗಾ ಗ್ರಾಮದಲ್ಲಿ ಕೂಲಿ ಮಾಡಿಕೊಂಡು ವಾಸಗಿದ್ದ ಕುಟುಂಬಕ್ಕೆ ಕೊರೋನಾದಿಂದ ಜಾರಿಗೊಳಿಸಿದ್ದ ಲಾಕಡೌನ್‌ನಿಂದಾಗಿ ಸರಿಯಾಗಿ ಕೂಲಿ ಸಿಗದೆ ಇರುವುದರಿಂದ ಆರ್ಥಿಕ ಸಂಕಷ್ಟಎದುರಾಗಿತ್ತು.

ತನಗೆ ಕೊರೋನಾ ಚಿಕಿತ್ಸೆ ನೀಡಿದ ವೈದ್ಯರಿಗೆ ಕೈಯಾರೆ ಬೆಳೆದ ಅಕ್ಕಿ ನೀಡಿದ ವೃದ್ಧ..! …

ಇದರಿಂದ ಮನನೊಂದ ಭಾರತಿ ಹಾಗೂ ಪ್ರಜ್ವಲ್‌ ಹಲಗಾ ಗ್ರಾಮದಲ್ಲಿರುವ ಸ್ವೀಟ್‌ಮಾರ್ಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಮಹಿಳೆಯ ಸಹೋದರ ದೂರಿನಲ್ಲಿ ತಿಳಿಸಿದ್ದಾನೆ.

ಕೊರೋನಾ ಮಹಾಮಾರಿ ವಿಶ್ವಕ್ಕೆ ಅಪ್ಪಳಿಸಿದ ಬಳಿಕ ದೇಶದ ಆರ್ಥಿಕ ಸ್ಥಿತಿಯೂ ಕೂಡ ಹದಗೆಟ್ಟಿದ್ದು, ಇದರಿಂದ ಜನಜೀವನ ಸಾಕಷ್ಟು ಸಮಸ್ಯೆ ಎದುರಿಸುವಂತಾಯ್ತು. ಈ ರೀತಿಯ ಘಟನೆಗಳು ಹಲವು ಬಾರಿ ಮರುಕಳಿಸುತ್ತಲೇ ಇವೆ.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ