ಕಾರವಾರ: ಲಾಡ್ಜ್ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ವನಶ್ರೀ ಲಾಡ್ಜ್ನಲ್ಲಿ ನಡೆದಿದೆ.
ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಕುರಿತು ಖಚಿತ ದೂರಿನ ಆಧಾರದ ಮೇಲೆ ಹಳಿಯಾಳದ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಪೊಲೀಸರು ಲಾಡ್ಜ್ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿ, ನಾಲ್ವರು ಯುವತಿಯರ ರಕ್ಷಣೆ ಮಾಡಿದ್ದಾರೆ.
ಹಲವು ವರ್ಷಗಳಿಂದ ಲಾಡ್ಜ್ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪ ಕೇಳಿ ಬರುತ್ತಿತ್ತು. ಈ ಕುರಿತು ಸಾರ್ವಜನಿಕರೇ ಲಾಡ್ಜ್ ಮಾಲೀಕನ ವಿರುದ್ಧ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೈಸೂರು ಒಡನಾಡಿ ಸಂಸ್ಥೆ, ಕರ್ನಾಟಕ ಮಕ್ಕಳ ರಕ್ಷಣೆ ಆಯೋಗದಿಂದ ದಾಳಿ ನಡೆಸಿ ಮಾಲೀಕನ ಸಮೇತ ನಾಲ್ಕು ಜನರನ್ನು ಬಂಧಿಸಿ, ನಾಲ್ವರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ.
Check Also
ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ
Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …