Breaking News

ಸಿನಿಮಾ ರಂಗದಲ್ಲಿ ಮಾತ್ರ ಇಲ್ಲ. ರಾಜಕೀಯ, ವ್ಯಾಪಾರಸ್ಥರ ರಂಗ, ಅಧಿಕಾರಿ ವಲಯ ಹಾಗೂ ಐಟಿ-ಬಿಟಿ ಯಲ್ಲೂ ಡ್ರಗ್ಸ್ ದಂಧೆ ಇದೆ:ಬಿ.ಸಿ.ಪಾಟೀಲ್

Spread the love

ಚಿಕ್ಕಬಳ್ಳಾಪುರ: ಡ್ರಗ್ಸ್ ದಂಧೆ ಕೇವಲ ಸಿನಿಮಾ ರಂಗದಲ್ಲಿ ಮಾತ್ರ ಇಲ್ಲ. ರಾಜಕೀಯ, ವ್ಯಾಪಾರಸ್ಥರ ರಂಗ, ಅಧಿಕಾರಿ ವಲಯ ಹಾಗೂ ಐಟಿ-ಬಿಟಿ ಯಲ್ಲೂ ಡ್ರಗ್ಸ್ ದಂಧೆ ಇದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಜಿಲ್ಲೆಯ ಚಿಂತಾಮಣಿಯಲ್ಲಿ ಮಾತನಾಡಿ, ಸಿನಿಮಾದವರು ಗಾಜಿನ ಮನೆಯಲ್ಲಿರುವುದರಿಂದ ಬೇಗ ತೋರಿಸುತ್ತೀದ್ದೀರಿ. ಸಮಾಜ ಹುಟ್ಟಿದಾಗಿಂದಲೂ ಈ ಸಾಮಾಜಿಕ ದಾಸ್ಯಗಳಿವೆ. ಅವುಗಳಿಗೆ ಕಡಿವಾಣ ಹಾಕುವಂತಹ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದರು.

ಸಿಎಂ ಯಡಿಯೂರಪ್ಪ ದೆಹಲಿ ಭೇಟಿ ವಿಚಾರಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಕೋವಿಡ್-19 ಲಾಕ್‍ಡೌನ್ ನಿಂದ 6 ತಿಂಗಳಿಂದ ಸಿಎಂ ದೆಹಲಿಗೆ ಹೋಗಲಾಗಲಿಲ್ಲ. ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿರಲಿಲ್ಲ. ಈ ಮಧ್ಯೆ ರಾಜ್ಯದಲ್ಲಿ ನೆರೆ ಪ್ರವಾಹ ಬಂದಿದೆ. ಹೀಗಾಗಿ ಆರ್ಥಿಕ ಪರಿಸ್ಥಿತಿ, ಹಣಕಾಸಿನ ವಿಚಾರ ಮಾತನಾಡಲು ತೆರಳಿದ್ದು, ಕೇಂದ್ರ ಸಚಿವರ ಜೊತೆ ಮಾತನಾಡಿ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದರು.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ