Breaking News

ಮಲೆ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿ ಏಣಿಕೆ1.47 ಕೋಟಿ ನಗದು, 17 ಗ್ರಾಂ ಚಿನ್ನ ಸಂಗ್ರಹ

Spread the love

ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿ ಏಣಿಕೆ ಮಾಡಲಾಗಿದ್ದು, ಒಂದು ಕೋಟಿಗೂ ಅಧಿಕ ಹಣ ಸಂಗ್ರಹವಾಗಿದೆ.

ಮಲೆ ಮಹದೇಶ್ವರ ಬೆಟ್ಟ ದೇವಸ್ಥಾನದಲ್ಲಿ ಪ್ರತಿ ತಿಂಗಳಿಗೊಮ್ಮೆ ಹುಂಡಿ ಏಣಿಕೆ ನಡೆಯುತ್ತಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಘೋಷಣೆ ಮಾಡಿದ್ದರಿಂದ ಹುಂಡಿ ಏಣಿಕೆ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ 82 ದಿನಗಳ ಬಳಿಕ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಆದರೆ ಈ ಬಾರಿ ಮಹದೇಶ್ವರನ ಆದಾಯದಲ್ಲಿ ಕುಸಿತ ಕಂಡು ಬಂದಿದೆ.

ಹುಂಡಿಯಲ್ಲಿ 1.47 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ. ಹಣದ ಜೊತೆಗೆ 17 ಗ್ರಾಂ ಚಿನ್ನ, 985 ಗ್ರಾಂ ಬೆಳ್ಳಿ ಸಹ ಮಹದೇಶ್ವರನ ಹುಂಡಿಯಲ್ಲಿ ಸಂಗ್ರಹವಾಗಿದೆ. ಈ ಮೊದಲು ಪ್ರತಿ ತಿಂಗಳ ಸರಾಸರಿ 1.50 ಕೋಟಿ ರೂಪಾಯಿ ಸಂಗ್ರಹವಾಗುತ್ತಿತ್ತು. ಆದರೆ ಈಗ 82 ದಿನಗಳಿಗೆ 1.47 ಕೋಟಿ ರೂಪಾಯಿ ಸಂಗ್ರಹವಾಗಿದೆ.


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ