Breaking News

ಮನೆಗಳಿಗೆ ಮಳೆ ನೀರು ನುಗ್ಗಿ ಊಟಕ್ಕೂ ಪರದಾಟ

Spread the love

ರಾಯಚೂರು: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ ಜನ ಊಟಕ್ಕೂ ಪರದಾಡುವಂತ ಪರಸ್ಥಿತಿ ನಿರ್ಮಾಣವಾಗಿದೆ.

ಮನೆಗಳಿಗೆ ನೀರು ನುಗ್ಗಿರುವ ರಾಯಚೂರು ನಗರದ ಜಹಿರಾಬಾದ್, ಸಿಯತಲಾಬ್ ಪ್ರದೇಶಗಳಲ್ಲಿ ತಾತ್ಕಾಲಿಕ ಪರಿಹಾರ ಕೇಂದ್ರ ತೆರೆದು ಊಟದ ವ್ಯವಸ್ಥೆ ಮಾಡಲಾಗಿದೆ. ಮನೆಯಲ್ಲಿನ ದವಸ ಧಾನ್ಯ ಹಾಗೂ ಎಲ್ಲಾ ವಸ್ತುಗಳು ನೀರುಪಾಲಾಗಿದ್ದರಿಂದ ಸಾರ್ವಜನಿಕರು ಪರದಾಡುತ್ತಿದ್ದಾರೆ.

ನಿಧಾನಕ್ಕೆ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ತಗ್ಗು ಪ್ರದೇಶಗಳಲ್ಲಿರುವ ಮನೆಗಳೆಲ್ಲಾ ಸತತವಾಗಿ ಸುರಿದ ಮಳೆಯಿಂದ ಜಲಾವೃತವಾಗಿವೆ. ಚರಂಡಿ ನೀರು ಹರಿಯಲು ಸಮರ್ಪಕ ವ್ಯವಸ್ಥೆಯಿಲ್ಲದ ಕಾರಣ ಮಳೆ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಸದ್ಯ ತಾತ್ಕಾಲಿಕ ವ್ಯವಸ್ಥೆಯಾಗಿ ಮನೆಯಲ್ಲಿ ನೀರು ನುಗ್ಗಿದ ಬಡಾವಣೆಗಳ ಜನರಿಗೆ ಜಿಲ್ಲಾಡಳಿತ, ನಗರಸಭೆ ಸದಸ್ಯರು ಊಟದ ವ್ಯವಸ್ಥೆ ಮಾಡಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ