Breaking News

ನಿಂತ ಕಾರಿನ ಗ್ಲಾಸ್ ಒಡೆದು ಆರು ಲಕ್ಷ ರೂಪಾಯಿ ದೋಚಿ ಪರಾರಿ

Spread the love

ದಾವಣಗೆರೆ: ನಿಂತ ಕಾರಿನ ಗ್ಲಾಸ್ ಒಡೆದು ಆರು ಲಕ್ಷ ರೂಪಾಯಿ ದೋಚಿ ಪರಾರಿಯಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ನಗರದ ತೋಗಟವೀರ ಕಲ್ಯಾಣ ಮಂಟಪದ ಬಳಿ ಈ ಘಟನೆ ನಡೆದಿದೆ. ಪ್ರಕಾಶ್ ಎಂಬುವರು ತೊಗಟವೀರ ಕಲ್ಯಾಣ ಮಂಟಪದ ಬಳಿ ಕಾರು ನಿಲ್ಲಿಸಿ ಅಂಗಡಿಗೆ ಹೋಗಿದ್ದರು. ಆದರೆ ಪ್ರಕಾಶ್ ವಾಪಸ್ ಬರುವಷ್ಟರಲ್ಲಿ ಕಾರಿನ ಗ್ಲಾಸ್ ಒಡೆದು ದುಷ್ಕರ್ಮಿಗಳು ಆರು ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದಾರೆ.

ತಕ್ಷಣ ಪ್ರಕಾಶ್ ಪೊಲೀಸರಿಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಬಡಾವಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಹಾಡಹಗಲೇ ಹಣ ದೋಚಿದ ದುಷ್ಕರ್ಮಿಗಳು ಪರಾರಿಯಾಗಿದ್ದು, ಮೊದಲೆ ಪ್ಲಾನ್ ಮಾಡಿದ್ದರು ಎಂದು ತಿಳಿದು ಬಂದಿದೆ.

ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಶೋಧಕಾರ್ಯ ಶುರು ಮಾಡಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ಸೌಲಭ್ಯ ಸದುಪಯೋಗವಾಗಲಿ

Spread the loveಯರಗಟ್ಟಿ: ಸರ್ಕಾರ ಕೃಷಿ ವಿಜ್ಞಾನಿಗಳಿಂದ ಸಂಸ್ಕರಿಸಿದ ಉತ್ತಮ ಬಿತ್ತನೆ ಬೀಜ ಸಬ್ಸಿಡಿಯಲ್ಲಿ ವಿತರಿಸುತ್ತಿದೆ. ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ