Breaking News

ಸ್ನೇಹಿತರು ಕರೆದರೆಂದು ಹೋದವ ಹೆಣವಾದ- ಮಂಡ್ಯದಲ್ಲಿ ಒಂದೇ ತಿಂಗಳಲ್ಲಿ 7 ಕೊಲೆ

Spread the love

ಮಂಡ್ಯ: ಸಕ್ಕರೆ ನಾಡು ಖ್ಯಾತಿಯ ಮಂಡ್ಯ ಇತ್ತೀಚಿಗೆ ಮರ್ಡರ್ ಸಿಟಿಯಾಗುತ್ತಿದೆಯೇ ಎಂಬ ಪ್ರಶ್ನೆ ಮೂಡುತ್ತಿದೆ. ಸೆಪ್ಟೆಂಬರ್ ತಿಂಗಳೊಂದರಲ್ಲೇ 7 ಮಂದಿಯ ಹತ್ಯೆ ನಡೆದಿದೆ. ಕಳೆದ ರಾತ್ರಿಯೂ ಯವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ.

ಮಂಡ್ಯ ತಾಲೂಕಿನ ಹೊಡಾಘಟ್ಟ ಗ್ರಾಮದಲ್ಲಿ 25 ವರ್ಷದ ಅಭಿಷೇಕ್‍ನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಸ್ನೇಹಿತರು ಕರೆದರೆಂದು ಮನೆಯಿಂದ ಹೊರ ಹೋದವನು ಊರಿನ ಮಧ್ಯಭಾಗದಲ್ಲೇ ಹೆಣವಾಗಿದ್ದಾನೆ. ಘಟನೆಯಿಂದಾಗಿ ಜನರು ಬೆಚ್ಚಿಬಿದ್ದಿದ್ದಾರೆ.

ನಿನ್ನೆ ರಾತ್ರಿ 10 ಗಂಟೆಗೆ ಮನೆಗೆ ಬಂದ ಅಭಿಷೇಕ್ ಗೆ ತಾಯಿ ಊಟ ಬಡಿಸಿದ್ದಾರೆ. ಊಟ ಮಾಡುತ್ತಿದಂತೆ ಯಾರೋ ಪೋನ್ ಮಾಡಿದ್ದಾರೆ. ಬಳಿಕ ಎಂದಿನಂತೆ ರೇಷ್ಮೆ ಸಾಕಣೆ ಮನೆಯಲ್ಲಿ ಮಲಗುವುದಾಗಿ ಹೇಳಿ ಹೋದವನನ್ನು ಯಾರೊ ದುಷ್ಕರ್ಮಿಗಳು ತಲೆಯ ಭಾಗಕ್ಕೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮುಂಜಾನೆ ಡೈರಿಗೆ ಹಾಲು ತೆಗೆದುಕೊಂಡು ಹೋಗುತ್ತಿದ್ದವರು ನೋಡಿದಾಗ ಕೊಲೆಯಾಗಿರುವುದು ತಿಳಿದಿದೆ.

ಅಭಿಷೇಕ್ ಸದಾ ಸ್ನೇಹಿತರೊಂದಿಗೆ ಕಾಲ ಕಳೆಯುತ್ತಿದ್ದ. ತಾನು ದುಡಿದ ಹಣವನ್ನೆಲ್ಲ ಗೆಳೆಯರೊಂದಿಗೆ ಸೇರಿ ಖರ್ಚು ಮಾಡಿಕೊಳ್ಳುತ್ತಿದ್ದನಂತೆ. ಹೆತ್ತವರು ಎಷ್ಟೇ ಬುದ್ಧಿವಾದ ಹೇಳಿದರೂ ಸ್ನೇಹಿತರ ಸಹವಾಸದಿಂದ ದೂರವಾಗಿರಲಿಲ್ಲ. ಶನಿವಾರವೂ ಬೆಳಗ್ಗೆ ಮನೆಯಿಂದ ಹೋದನು ರಾತ್ರಿ 10 ಗಂಟೆಗೆ ಬಂದಿದ್ದ. ರೇಷ್ಮೆ ಸಾಕಾಣಿಕೆ ಮನೆಗೆ ಮಲಗಲು ಹೋದವನನ್ನು ಯಾರೋ ಸ್ನೇಹಿತರೇ ಕರೆಸಿಕೊಂಡು ಕೊಲೆ ಮಾಡಿರಬಹುದು ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಗ್ರಾಮದ ಮಧ್ಯ ಭಾಗದಲ್ಲೇ ನಡೆದ ಕೊಲೆಯಿಂದಾಗಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಕೆರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ಕ್ಯಾನ್ಸರ್ ಪೀಡಿತನಿಂದ ವಿದ್ಯಾರ್ಥಿನಿ ಕೊಲೆ ಕೇಸ್​: ಪ್ರೀ ಪ್ಲ್ಯಾನ್ಡ್ ಮರ್ಡರ್ ರಹಸ್ಯ ಬಯಲು

Spread the loveಚಿತ್ರದುರ್ಗ, ಆಗಸ್ಟ್​ 21: ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಚೇತನ್​​ನಿಂದಲೇ ವಿದ್ಯಾರ್ಥಿನಿ (student) ವರ್ಷಿತಾ(19) ಕೊಲೆ (kill) ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಡಿವೈಎಸ್​ಪಿ ಪಿ.ದಿನಕರ್, ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ