Breaking News
Home / ಜಿಲ್ಲೆ / ಕಲಬುರ್ಗಿ / ಕೊಚ್ಚಿ ಹೋಗುತ್ತಿದ್ದಾಗ ಹಗ್ಗ ನೀಡಿದ್ರೂ ಬಾರದ ಯುವಕ – ಹೃದಯಾಘಾತದಿಂದ ಸಾವು

ಕೊಚ್ಚಿ ಹೋಗುತ್ತಿದ್ದಾಗ ಹಗ್ಗ ನೀಡಿದ್ರೂ ಬಾರದ ಯುವಕ – ಹೃದಯಾಘಾತದಿಂದ ಸಾವು

Spread the love

ಕಲಬುರಗಿ: ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಯುವನೋರ್ವ ಭಯಗೊಂಡು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ತಾಕೂಕಿನ ಚಂದನಲ್ಲಿ ಗ್ರಾಮದ ಬಳಿ ನಡೆದಿದೆ.

ಸಾವನ್ನಪ್ಪಿದ ಯುವಕನನ್ನು ಪೀರಶೆಟ್ಟಿ (29) ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆ ನೀರಿನಿಂದ ಹಳ್ಳ ಕೊಳ್ಳಗಳು ತುಂಬಿ ರಭಸದಿಂದ ಹರಿಯುತ್ತಿವೆ. ಈ ಸಮಯದಲ್ಲಿ ಹಳ್ಳ ದಾಟಲು ಹೋದ ಪೀರಶೆಟ್ಟಿ ನೀರನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾನೆ.

ಆದರೆ ಹಳ್ಳಕ್ಕೆ ಆಡಲಾಗಿ ಹಾಕಿದ್ದ ಕಂಬವನ್ನು ಹಿಡಿದು ಪೀರಶೆಟ್ಟಿ ನೀರಿನ ಮಧ್ಯದಲ್ಲಿ ನಿಂತುಕೊಂಡಿದ್ದಾನೆ. ಈ ವೇಳೆ ಆತನಿಗೆ ಸ್ಥಳದಲ್ಲಿದ್ದ ಕೆಲವರು ಹಗ್ಗ ನೀಡಿದ್ದಾರೆ. ನೀರಿನ ರಭಸಕ್ಕೆ ಭಯಗೊಂಡ ಯುವಕ ಹಗ್ಗ ಹಿಡಿದು ಮೇಲೆ ಬಂದಿಲ್ಲ. ಆದರೆ ಕೆಲ ಸಮಯದ ನಂತರ ಭಯದಿಂದ ಹೃದಯಾಘಾತವಾಗಿ ಸಾವನ್ನಪ್ಪಿದ್ದಾನೆ. ಈ ವೇಳೆ ಯುವಕನನ್ನು ರಕ್ಷಿಸಲು ಆತನ ಸಹೋದರ ಕೂಡ ನೀರಿಗೆ ಇಳಿದಿದ್ದಾರೆ. ಆದರೆ ನೀರಿನ ರಭಸಕ್ಕೆ ಅವರು ಕೊಚ್ಚಿಹೋಗಿದ್ದು, ನಂತರ ಕಷ್ಟಪಟ್ಟು ಈಜಿ ದಡ ಸೇರಿದ್ದಾರೆ.

ನರೋಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ