Breaking News

ಪ್ರೀಮಿಯರ್ ಬಹುಮಹಡಿ ಕಟ್ಟಡದ ಹಿಂಭಾಗದಲ್ಲಿ ಮಳೆ ನೀರಿನ ರಭಸಕ್ಕೆ ಅಪಾಟ್ರ್ಮೆಂಟ್‍ನ ಹಿಂಭಾಗದ ತಡೆಗೋಡೆ ಕುಸಿದಿದೆ.

Spread the love

ಉಡುಪಿ: ಜಿಲ್ಲೆಯಲ್ಲಿ ಮಳೆಯ ಅವಾಂತರ ಮುಂದುವರೆದಿದ್ದು, ಮಣಿಪಾಲ ಸಿಂಡಿಕೇಟ್ ಸರ್ಕಲ್ ನಲ್ಲಿರುವ ಪ್ರೀಮಿಯರ್ ಬಹುಮಹಡಿ ಕಟ್ಟಡದ ಹಿಂಭಾಗದಲ್ಲಿ ಮಳೆ ನೀರಿನ ರಭಸಕ್ಕೆ ಅಪಾಟ್ರ್ಮೆಂಟ್‍ನ ಹಿಂಭಾಗದ ತಡೆಗೋಡೆ ಕುಸಿದಿದೆ.

ಕಮರ್ಷಿಯಲ್ ಕಂಪ್ಲೆಕ್ಸ್ ಆಗಿರುವ ಪ್ರೀಮಿಯರ್ ಕಟ್ಟಡದ ಜೊತೆ ವಸತಿ ಸಮುಚ್ಛಯ ಸಹ ಇರುವುದರಿಂದ ಅಲ್ಲಿನ ಎಲ್ಲ ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಮಣಿಪಾಲ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಇದೇ ಕಟ್ಟಡದಲ್ಲಿ ವಾಸವಿದ್ದು, ಸದ್ಯ ಕಾಲೇಜುಗಳು ತೆರೆಯದ ಕಾರಣ ವಿದ್ಯಾರ್ಥಿಗಳ ಸಂಖ್ಯೆ ಬಹಳ ಕಮ್ಮಿ ಇದೆ.

ಕಟ್ಟಡದಲ್ಲಿ 35 ಮನೆಗಳಿದ್ದು, ಎಲ್ಲರನ್ನೂ ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಡೊಮಿನೊಸ್ ಪಿಜ್ಜಾ ಇಂದು ಅಂಗಡಿಯನ್ನು ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಬಹುಮಹಡಿ ಕಟ್ಟಡ ಇರುವುದರಿಂದ ಪೊಲೀಸರು ಏಕಮುಖ ಸಂಚಾರ ವ್ಯವಸ್ಥೆಯನ್ನು ಮಾಡಿದ್ದಾರೆ. ಉಡುಪಿ-ಮಣಿಪಾಲ ರಸ್ತೆಯ ಒಂದು ಬದಿ ಓಡಾಟವನ್ನು ಬಂದ್ ಮಾಡಲು ಹೇಳಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ.

ಮಣಿಪಾಲ ನಗರದ ಎಲ್ಲ ಮಳೆ ನೀರು ಈ ಕಟ್ಟಡದ ಹಿಂಭಾಗದಲ್ಲಿ ಧಾರಾಕಾರವಾಗಿ ಹರಿದು ಹೋಗುವುದರಿಂದ ಭೂಕುಸಿತ ಉಂಟಾಗಿದೆ. ಒಳಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆಯಾಗಿದ್ದರೆ ಕಟ್ಟಡದ ಹಿಂಭಾಗಕ್ಕೆ ಮಳೆ ನೀರು ಬರುತ್ತಿರಲಿಲ್ಲ, ಸಮಸ್ಯೆ ಆಗುತ್ತಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಈ ಹಿಂದೆ ಮಣಿಪಾಲ್ ಐನಾಕ್ಸ್ ಕಟ್ಟಡದ ಸಮೀಪ ಭೂಕುಸಿತ ಆಗಿದ್ದು, ಆತಂಕ ಸೃಷ್ಟಿಯಾಗಿತ್ತು.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ