Breaking News

ಜನರು ಒಂದೆಡೆ ಗುಂಪು ಸೇರುವಂತಿಲ್ಲ: ಬಿಬಿಎಂಪಿ ಆದೇಶ

Spread the love

ಬೆಂಗಳೂರು, ಮಾ.12: ಕೊರೋನ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಕಾರಣ ಯಾವುದೇ ಕಾರಣಕ್ಕೂ ಜನ ಒಂದೆಡೆ ಗುಂಪು ಸೇರುವಂತಿಲ್ಲ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.

ಬಿಬಿಎಂಪಿ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳು, ಬಾರ್ ಆಯಂಡ್ ರೆಸ್ಟೊರೆಂಟ್, ಹೊಟೇಲ್, ಕಲ್ಯಾಣ ಮಂಟಪ, ಚಿತ್ರಮಂದಿರ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನ ಒಟ್ಟಾಗಿ ಗುಂಪು ಸೇರಬಾರದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದ್ದಾರೆ.

ಹಾಗೆಯೇ ಪೊಲೀಸರ ಅನುಮತಿ ಇಲ್ಲದೆ, ಎನ್‌ಒಸಿ ಪ್ರತಿ ಪಡೆಯದೆ ಯಾವುದೇ ಸಾರ್ವಜನಿಕ ಸಭೆಯಗಳನ್ನು ಆಯೋಜಿಸುವಂತಿಲ್ಲ ಎಂದು ತಿಳಿಸಿದ್ದಾರೆ

ಜಗತ್ತಿನಾದ್ಯಂತ ತಲ್ಲಣ ಮೂಡಿಸುತ್ತಿರುವ ಕೊರೋನ ವೈರಸ್ ಸೋಂಕು ರಾಜ್ಯದ ಐವರಲ್ಲಿ ಪತ್ತೆಯಾಗಿದೆ. ಸೋಂಕಿತರನ್ನು ಕುಟುಂಬ ಸದಸ್ಯರಿಂದ ಪ್ರತ್ಯೇಕವಾಗಿರಿಸಿ, ಚಿಕಿತ್ಸೆ ನೀಡಲಾಗುತ್ತಿದೆ


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ