Breaking News

ಕೊವಿಡ್-19 ಪಿಡುಗನ್ನು ಸರ್ಕಾರ ಸಮರ್ಪಕವಾಗಿ ನಿಭಾಯಿಸಿದೆ: ಶ್ರೀರಾಮುಲು

Spread the love

  ವಿಧಾನಪರಿಷತ್​ನಲ್ಲಿ ವಿಪಕ್ಷ ನಾಯಕರಾಗಿರುವ ಕಾಂಗ್ರೆಸ್​ನ ಎಸ್ ಅರ್ ಪಾಟೀಲ್ , ಕೊವಿಡ್ -19 ಸೋಂಕನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ , ಮುಂದಿನ ದಿನಗಳಲ್ಲಿ ಈ ಸಮಸ್ಯೆಯನ್ನು ಹೇಗೆ ನಿಭಾಯಿಸುತ್ತೀರಿ ಎಂದು ಪ್ರಶ್ನೆ ಕೇಳಿ , ಸಚಿವರ ಕಾರ್ಯವೈಖರಿ ಬಗ್ಗೆ ಟೀಕಿಸಿದ ನಂತರ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ ಶ್ರೀರಾಮುಲು , ವಿಪಕ್ಷ ನಾಯಕರ ಮಾತಿನಿಂದ ತಮ್ಮ ಮನಸ್ಸಿಗೆ ನೋವಾಗಿದೆ ಎಂದರು .

ಮುಂದುವರಿದದು ಹೇಳಿದ ಸಚಿವರು , ” ಕೊವಿಡ್ -19 ಸೋಂಕಿನ ಆರಂಭದ ದಿನಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ನೀಡಿರಲಿಲ್ಲ . ಮಾರ್ಚ್ ತಿಂಗಳಲ್ಲಿ ಭಾರತದಲ್ಲೇ ಮೊದಲ ಸಾವು ಕಲಬುರಗಿಯಲ್ಲಿ ಆಯ್ತು . ಆಗ ಸ್ವತಃ ನಾನೇ ಅಲ್ಲಿಗೆ ಹೋಗಿದ್ದೆ . ಆಗ ಕೊವಿಡ್-19 ಬಗ್ಗೆ ಜನರು ಹೆಚ್ಚು ಭಯಭೀತರಾಗಿದ್ದರು.

ನಾನೇ ಮುಂದೆ ನಿಂತು ಎಲ್ಲಾ ಕೆಲಸ ಮಾನಿಟರ್ ಮಾಡಿ ವಾಪಸಾಗಿದ್ದೆ ,” ಎಂದರು.

” ಈ ವ್ಯಾಧಿಯನ್ನು ಸಂಪೂರ್ಣ ಹೊಗಲಾಡಿಸಲು ನಮ್ಮಿಂದ ಆಗಲ್ಲ . ನಾವೆಲ್ಲ ನಿಮಿತ್ತ ಮಾತ್ರ . ರಾಜ್ಯ ಸರ್ಕಾರ ಸಾಧ್ಯವಾದಷ್ಟು ಉತ್ತಮ ಕೆಲಸ ಮಾಡುತ್ತಿದೆ . ಟೆಕ್ನಾಲಜಿ ಮುಂದುವರಿದ ರಾಷ್ಟ್ರಗಳಲ್ಲೂ ಲಸಿಕೆ ಕಂಡುಹಿಡಿಯಲಾಗಿಲ್ಲ . ಆದರೂ ಸರ್ಕಾರಗಳು ಕೊವಿಡ್ -19 ಸೋಂಕನ್ನು ನಿಯಂತ್ರಣ ಮಾಡುತ್ತಿವೆ . ಬಿಜೆಪಿ ಸರ್ಕಾರಗಳು ಅಧಿಕಾರದಲ್ಲಿರುವ ಕಡೆ ಮಾತ್ರ ಈ ರೋಗ ಬಂದಿಲ್ಲ , ಎಲ್ಲ ರಾಜ್ಯಗಳಲ್ಲೂ ಅದು ವ್ಯಾಪಿಸಿದೆ . ನಮ್ಮ ಸರ್ಕಾರ ಪಿಡುಗನ್ನು ಸಮರ್ಪಕವಾಗಿ ನಿಭಾಯಿಸಿದೆ ,” ಎಂದು ಶ್ರೀರಾಮುಲು ಹೇಳಿದರು .


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ