Breaking News

ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡದಿದ್ದಕ್ಕೆ ರಾಡ್​ನಿಂದ ಹಲ್ಲೆ!

Spread the love

ನೆಲಮಂಗಲ: ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡದ ಹಿನ್ನೆಲೆಯಲ್ಲಿ ಬಸ್ ಚಾಲಕನ ತಲೆಗೆ ರಾಡ್‌ನಿಂದ ಹಲ್ಲೆ ಮಾಡಿರುವ ಘಟನೆ ನೆಲಮಂಗಲ ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಶೌಚಾಲಯ ಬಳಸಿ ಹಣ ನೀಡಲಿಲ್ಲ ಎಂದು ಶೌಚಾಲಯ ನಿರ್ವಹಣೆ ಮಾಡುತ್ತಿದ್ದ ರಾಜೇಶ್‌ ಎಂಬಾತ ಬಸ್ ಚಾಲಕ ವೆಂಕಟೇಶ್ ಮೇಲೆ ರಾಡ್​ನಿಂದ ಹಲ್ಲೆ ಮಾಡಿದ್ದಾರೆ. ಗಾಯಾಳು ವೆಂಕಟೇಶ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ರಾಜೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ